ಶಿವಮೊಗ್ಗ: ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ ಕಾರನ್ನು ವಾಪಾಸ್ ಕೊಡದೇ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮೋಸ ಮಾಡಿದ್ದಾನೆಂದು, ಸೈಯ್ಯದ್ ಸಾದಿಕ್ ದೂರು ನೀಡಿದ್ದರು.
ಪ್ರರಕಣದಲ್ಲಿ ಆರೋಪಿ ಹಾಗೂ ಕಾರಿನ ಪತ್ತೆಗಾಗಿ ಎಸ್.ಪಿ ಮಿಥುನ್ಕುಮಾರ್ ಮಾರ್ಗದರ್ಶನದಲ್ಲಿ ಹಿರಿಯ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಸೋಮವಾರ ಪ್ರಕರಣದ ಆರೋಪಿ ಕಿರಣ್ (35) ಈತನನ್ನು ಬಂಧಿಸಿ ಅಂದಾಜು 10 ಲಕ್ಷ ರೂ.ಗಳ 2 ಟೊಯೋಟಾ ಇನ್ನೋವಾ ಕಾರು, 3 ಸ್ವಿಫ್ಟ್ ಡಿಸೈರ್ ಕಾರು ಮತ್ತು 3 ಮಾರುತಿ ಸುಜುಕಿ ಎರ್ಟಿಗಾ ಕಾರು ಸೇರಿದಂತೆ ಒಟ್ಟು 8 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ
ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…