ಶಿವಮೊಗ್ಗ : ಈಜಲು ಹೋದ ಯುವಕ, ಇಂಜಿನಿಯರ್ ಪದವೀಧರ ನೀರು ಪಾಲಾಗಿರುವ ಘಟನೆ ನಿನ್ನೆ ಸಂಜೆ ಸಮೀಪದ ಹೊಸೂಡಿಯ ಹೊನ್ನವಿಲೆ ಗ್ರಾಮದಲ್ಲಿ ನಡೆದಿದೆ.
ಹೊನ್ನವಿಲೆ ಗ್ರಾಮದ ಭದ್ರಾ ಚಾನೆಲ್ ಗೆ ಈಜಲು ಹೋಗಿದ್ದ ಸೂರ್ಯ (26) ಎಂಬ ಯುವಕ ನೀರು ಪಾಲಾಗಿದ್ದಾರೆ. ಮೂವರು ಸ್ನೇಹಿತರೊಂದಿಗೆ ಸೋಮವಾರ ಮಧ್ಯಾಹ್ನ ಸ್ನಾನಕ್ಕೆಂದು ಭದ್ರಾ ಚಾನೆಲ್ಗೆ ಸೂರ್ಯ ತೆರಳಿದ್ದರು.
ಈಜು ಹೊಡೆಯುತ್ತಲೆ ಚಾನೆಲ್ ನೀರಿನಲ್ಲಿ ಮುಂದೆ ಸಾಗಿದ ಅವರು ನೀರಿನಲ್ಲಿ ಮುಳುಗಿದ್ದಾರೆ. ಮುಳುಗಿದವರು ಮೇಲೇಳಲಿಲ್ಲ. ಸ್ನೇಹಿತರಿಗೆ ಗಾಬರಿಯಾಗಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಹುಡುಕಾಟ ಆರಂಭಿಸಿದ್ದಾರೆ. ನಂತರ ಸೂರ್ಯ ಶವವಾಗಿ ಪತ್ತೆಯಾಗಿದ್ದಾರೆ.
ನಗರದ ಪಿಂಗಾರ ಬಾರ್ ಎದುರುಗಡೆಗಿದ್ದ ರವಿ ವೈನ್ ಶಾಪ್ ಈಗ ಬಟ್ಟೆ ಅಂಗಡಿಯಾಗಿದ್ದು, ಇದರ ಮಾಲೀಕ ಸೋಮಶೇಖರ್ ಎಂಬುವರ ಮಗ ಸೂರ್ಯ ಬೆಂಗಳೂರಿನಲ್ಲಿ ಇಂಜಿನಿಯರ್ ಮುಗಿಸಿ ಕೆಲಸಕ್ಕೆ ಸೇರಿಕೊಂಡಿದ್ದರು. ಬೆಂಗಳೂರಿನಿಂದ ರಜೆಯ ಮೇಲೆ ಬಂದಿದ್ದ ಸೂರ್ಯ ವಿಧಿಯ ಆಟಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿರಿಸಲಾಗಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸೂರ್ಯ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು. ಸಂಜೆ 4 ಗಂಟೆಗೆ ಈ ಅವಘಡ ಸಂಭವಿಸಿದೆ.
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.