ಸ್ವರಚಿತ ಕವನವಾಚನ ಸ್ಪರ್ಧೆಯಲ್ಲಿ ಸೌಜನ್ಯ ಆರ್ ರಾಜ್ಯ ಮಟ್ಟಕ್ಕೆ ಆಯ್ಕೆ
ಹೊಸನಗರ: ಸೊರಬದಲ್ಲಿ ನಡೆದ 18ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹೈಸ್ಕೂಲ್ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ಸೌಜನ್ಯ ಆರ್ರವರು ಸ್ವರಚಿತ ಕವನವಾಚನ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಹೊಸನಗರದ ಹೆಚ್.ಡಿ ರಮೇಶ್ ಕೆ.ಸಿ ಪೂರ್ಣಿಮ ದಂಪತಿಗಳ ಪುತ್ರಿಯಾಗಿದ್ದು ಇವರನ್ನು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹಾಗೂ ಇಲಾಖೆಯ ಎಲ್ಲ ಸಿಬ್ಬಂದಿಗಳು ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಅಭಿನಂದಿಸಿ ರಾಜ್ಯ ಮಟ್ಟದಲ್ಲಿಯೂ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.