ಹಣ್ಣು, ಹಸಿ ತರಕಾರಿ ಸೇವನೆಯಿಂದ ಗರ್ಭಿಣಿಯರಲ್ಲಿ ರಕ್ತಹೀನತೆ ದೂರ

ರಿಪ್ಪನ್‌ಪೇಟೆ: ರಕ್ತಹೀನತೆಯಿಂದ ಬಳಲುವ ಗರ್ಭಿಣಿಯರು ಸೇರಿದಂತೆ ಇತರೆ ಎಲ್ಲರೂ ಪೌಷ್ಟಿಕಾಂಶದ ಹಣ್ಣು, ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಅಧಿಕಾರಿ ಶಶಿರೇಖಾ ಕರೆ ನೀಡಿದರು.

ಮೂಗುಡ್ತಿ ಅಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ ಬಳಕೆಯಿಂದಾ ಆಹಾರದ ಬೆಳೆಗಳಲ್ಲಿ ಪೌಷ್ಟಿಕಾಂಶವೇ ಇಲ್ಲದೇ ಇರುವುದರಿಂದ ನಾವು ನಿತ್ಯ ವಿಷಯುಕ್ತ ಆಹಾರ ಸೇವಿಸುವಂತಾಗಿದೆ. ಆ ಕಾರಣ ಸಾವಯವ ಗೊಬ್ಬರದಲ್ಲಿ ಬೆಳೆದ ಪೌಷ್ಟಿಕಾಂಶದ ಹಣ್ಣು, ಹಸಿ ತರಕಾರಿ, ಗೆಡ್ಡೆ-ಗೆಣಸು ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿನ ನುಗ್ಗೆಕಾಯಿ ಇನ್ನಿತರ ಸೊಪ್ಪು ಬಳಸುವುದರಿಂದ ಉತ್ತಮ ಆರೋಗ್ಯದಿಂದಿರಲು ಸಾಧ್ಯವೆಂದರು.

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ವನಿತಾ ಗಂಗಾಧರ್ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಾಲ ವಿಕಾಸ ಸಮಿತಿಯ ಆಧ್ಯಕ್ಷೆ ಜಯಂತಿ ಪ್ರದೀಪ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ವಿಶುಕುಮಾರ್, ಗುರುಗೌಡರ, ವಸಂತಮ್ಮ, ಯತೀಶ್, ಆರೋಗ್ಯ ಇಲಾಖೆಯ ರಾಘವೇಂದ್ರ, ಮುಖ್ಯೋಪಾಧ್ಯಾಯ ಉದಯಕುಮಾರ್, ಅಂಗನವಾಡಿ ಮೇಲ್ವಿಚಾರಕಿ ಚಂದ್ರಕಲಾ ಇನ್ನಿತರರು ಹಾಜರಿದ್ದರು.

ಮೂಗುಡ್ತಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗಾಯಿತ್ರಿ ಸ್ವಾಗತಿಸಿದರು. ತಳಲೆ ಅಂಗನವಾಡಿ ಕಾರ್ಯಕರ್ತೆ ಕೃಪಾ ನಿರೂಪಿಸಿದರು. ಜಂಬಳ್ಳಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗಾಯಿತ್ರಿ ವಂದಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

20 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

24 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago