ಹಬ್ಬದ ಹಿನ್ನೆಲೆ, ದೇವಸ್ಥಾನಕ್ಕೆ ಬಂದಿದ್ದ ಯುವಕ ನದಿ ನೀರಿನಲ್ಲಿ ಮುಳುಗಿ ಸಾವು !
ಸೊರಬ: ಮಕರ ಸಂಕ್ರಾಂತಿ ಹಿನ್ನೆಲೆ ನದಿಗೆ ಸ್ನಾನಕ್ಕೆ ಇಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಆನವಟ್ಟಿ ಹೋಬಳಿಯ ತಲಗಡ್ಡೆ ಸಮೀಪ ವರದಾ ನದಿಯಲ್ಲಿ ಸೋಮವಾರ ನಡೆದಿದೆ.
ಹಾನಗಲ್ ತಾಲೂಕಿನ ನಿಟಗಿನಕೊಪ್ಪ ಗ್ರಾಮದ ಪ್ರವೀಣ್ (25) ಮೃತ ಯುವಕ. ತಲಗಡ್ಡೆ ಸಮೀಪದ ದೇವಸ್ಥಾನಕ್ಕೆಂದು ಕುಟುಂಬ ಸಮೇತರಾಗಿ ಆಗಮಿಸಿದ್ದ ವೇಳೆ, ನದಿಯಲ್ಲಿ ಸ್ನಾನಕ್ಕೆ ಇಳಿದ ಪ್ರವೀಣ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಅಗ್ನಿಶಾಮಕ ಠಾಣೆ ಸಿಬ್ಬಂದಿ ಸತತ ಆರು ತಾಸು ಶೋಧ ಕಾರ್ಯ ನಡೆಸಿ, ಯುವಕನ ಶವವನ್ನು ನದಿಯಿಂದ ಮೇಲೆತ್ತಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.