ಶಿವಮೊಗ್ಗ: ಶುಕ್ರವಾರ ಸಂಜೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಪೋಲೀಸರು ಹಾಫ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುವವರನ್ನು ತಡೆದು, ಸಾವಿರಾರು ಹಾಫ್ ಹೆಲ್ಮೆಟ್ಗಳನ್ನು ವಶಪಡಿಸಿಕೊಂಡರು.
ಬೈಕ್ ಸವಾರರಿಗೆ ದಂಡವನ್ನು ವಿಧಿಸದೆ ಉತ್ತಮ ಗುಣಮಟ್ಟದ ಫುಲ್ ಹೆಲ್ಮೆಟ್ ಧರಿಸುವಂತೆ ತಾಕೀತು ಮಾಡಲಾಯಿತು.
ಹಾಫ್ ಹೆಲ್ಮೆಟ್ ಧರಿಸಿದವರೆ ಖುದ್ದಾಗಿ ಬಂದು ಬಿಸಾಕಿ ಹೋಗುತ್ತಿದ್ದುದನ್ನು ಕಂಡು ಅಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಪುಕ್ಕಟ್ಟೆ ಮನರಂಜನೆ ದೊರೆಯಿತು.
ಗೋಪಿ ವೃತ್ತದ ಬಳಿ ನಡೆದ ಕಾರ್ಯಾಚರಣೆಯನ್ನು ಸ್ವತಃ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವೀಕ್ಷಿಸಿದರು. ಈ ಸಂದರ್ಭದಲ್ಲಿ ಪ್ರಮುಖ ಪೊಲೀಸ್ ಅಧಿಕಾರಿಗಳಾದ ಡಿಎಸ್ಪಿ ಸುರೇಶ್, ಪಿ ಐ ಸಂತೋಷ್ ಕುಮಾರ್, ಪಿಎಸ್ಐ ತಿರುಮಲೇಶ್, ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಯಾವುದೇ ರೀತಿಯ ಗೊಂದಲವಿಲ್ಲದೆ ನಡೆಸಿದ ಉತ್ತಮ ಕಾರ್ಯಾಚರಣೆಗೆ ಮೆಚ್ಚಿದ ಸಾರ್ವಜನಿಕರೇ ಸಿಹಿ ಹಂಚಿದ್ದು ವಿಶೇಷವಾಗಿತ್ತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…