Categories: Shivamogga

ಹಾಲು ಖರೀದಿ ದರ ಇಳಿಕೆಗೆ ಆಕ್ರೋಶ, ರಸ್ತೆಗೆ ಹಾ‌ಲು ಸುರಿದು ಪ್ರತಿಭಟನೆ

ಶಿವಮೊಗ್ಗ: ಉತ್ಪಾದಕರಿಂದ ಹಾಲು ಖರೀದಿ ದರ ಇಳಿಕೆ ಮಾಡಿರುವುದನ್ನು ಖಂಡಿಸಿ ಭಾರತೀಯ ಕೀಸಾನ್ ಸಂಘ ದಕ್ಷಿಣ ಪ್ರಾಂತ್ಯದ ನೇತೃತ್ವದಲ್ಲಿ ಹಾಲು ಉತ್ಪಾದಕ ರೈತರು ಇಂದು ಶಿಮೂಲ್ ಎದುರು ರಸ್ತೆಗೆ ಹಾಲು ಸುರಿದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಈ ಹಿಂದೆ 2023ರ ಅಗಸ್ಟ್ 1ರಂದು 1ಲೀಟರ್‌ಗೆ 3 ರೂ. ಏರಿಕೆ ಮಾಡಿತ್ತು. ಆಗ ರೈತರಿಗೆ 33.50 ರೂ. ಸಿಗುತ್ತಿತ್ತು. ಮತ್ತೆ ಅಕ್ಟೋಬರ್ 1 ರಂದು ಪ್ರತಿ ಲೀಟರ್‌ಗೆ 1.25ರೂ.ನಷ್ಟು ಕಡಿತವಾಗಿ 31.75 ರೂ. ಸಿಗುತ್ತಿತ್ತು. ಆದರೆ ಈಗ ಮತ್ತೆ ಲೀಟರ್‌ಗೆ 2 ರೂ. ಕಡಿಮೆ 29.75 ರೂ. ಕೊಡುತ್ತಿದ್ದಾರೆ. ಕಳೆದ 8 ತಿಂಗಳಿನಲ್ಲಿ 3 ರೂ. ಏರಿಕೆ ಮಾಡಿ 3.70 ಕಡಿತ ಮಾಡಿದ್ದಾರೆ. ಅಂದರೆ ಮೂಲ ದರಕ್ಕಿಂತ 70 ಪೈಸೆ ಕಡಿಮೆಯಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದರು.

ಹಾಲು ಉತ್ಪಾದಕರು ಸಂಕಷ್ಟ ಎದುರಿಸುತ್ತಿದ್ದಾರೆ. ಪಶು ಆಹಾರ ದರ ಕೂಡ ಏರಿಕೆಯಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಅತಿವೃಷ್ಠಿ ಇಲ್ಲವೇ ಅನಾವೃಷ್ಠಿಗೆ ರೈತರು ತೊಂದರೆಗೆ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೈನುಗಾರಿಕೆಯಿಂದ ಜೀವನ ಸಾಗಿಸೋಣ ಎಂದರೆ ಸರ್ಕಾರ ಹಾಲಿನ ದರದ ಹಾವು-ಏಣಿ ಆಡವಾಡುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.

ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ಕನಿಷ್ಟ 3.5 ಪ್ಯಾಟಿಗೆ 50 ರೂ. ನಿಗಧಿ ಮಾಡಬೇಕು. ಪಶು ಆಹಾರ ದರವನ್ನು 50 ಕೆ.ಜಿ. ಚೀಲಕ್ಕೆ 800 ರೂ. ನಿಗಧಿ ಮಾಡಬೇಕು. ಪಶು ಕಾರ್ಖಾನೆಗಳಿಗೆ ಕರ್ನಾಟಕ ರೈತರಿಂದ ಬೆಳೆದ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು. ಉತ್ಪಾದಕರ ಹಸುಗಳಿಗೆ ಮೇವಿನ ಬೀಜ ನೀಡಬೇಕು. ಕೃತಕ ಗರ್ಭಧಾರಣೆ ಉಚಿತವಾಗಿ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.facebook.com/share/v/6Ge5c4be8PNpaFZT/?mibextid=gik2fB


ಈ ಸಂದರ್ಭದಲ್ಲಿ ರೈತ ಮುಖಂಡರು ಮಾತನಾಡಿ, ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಳಿಸಿದ ಹಾಲಿನ ದರವನ್ನು ತಕ್ಷಣವೇ ಏರಿಸಬೇಕು. ಇಲ್ಲದಿದ್ದರೆ, ಗ್ರಾಮಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ 3 ಜಿಲ್ಲೆಗಳ ನೂರಾರು ಹಾಲು ಉತ್ಪಾದಕರು ಭಾಗವಹಿಸಿದ್ದರು. ಭಾರತೀಯ ಕೀಸನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಕೆ.ಸಿ. ಸದಾಶಿವಪ್ಪ ಪ್ರವೀಣ್ ಪಟೇಲ್, ಗಂಗಾಧರ ಕಾಸರಗೂಡು, ಭೀಮರಾವ್, ಸುಧಾಪರಮೇಶ್ವರಪ್ಪ, ಅಮೃತಾ ಚಳ್ಳಕೆರೆ ಸೇರಿದಂತೆ ಹಲವರಿದ್ದರು.

ಶಿಮೂಲ್ ಎದುರು ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆ ನಡೆಸಿದರು. ಇದರಿಂದಾಗಿ ಶಿವಮೊಗ್ಗ-ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಗಂಟೆಗಟ್ಟಲೆ ನಿಲ್ಲುವಂತಾಯಿತು.
ರಸ್ತೆ ಕಾಮಗಾರಿ ನಡೆಯುತ್ತಿದ್ದು, ಶಿಮೂಲ್ ಗೇಟ್ ಎದುರಲ್ಲೇ ರಸ್ತೆ ತಡೆ ನಡೆಸಿದ ಕಾರಣ ಭಾರಿ ಸಂಖ್ಯೆಯ ವಾಹನಗಳ ಸಂಚಾರ ಗಂಟೆಗೂ ಅಧಿಕ ಕಾಲ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ಹರಸಾಹಸ ಪಡುವಂತಾಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago