ಬೆಂಗಳೂರು/ಶಿವಮೊಗ್ಗ : ಚುನಾಯಿತ ಪ್ರತಿನಿಧಿಗಳ ಜೊತೆ ಯಾವಾಗಲೂ ಹಿಂಬಾಲಕರು ಇರುವುದು ಸಾಮಾನ್ಯ ಸಂಗತಿ. ಹಾಗೆ ಅವರ ಹಿಂದೆ ಜಾಸ್ತಿ ಜನ ಇದ್ದಷ್ಟು ಅದಕ್ಕೊಂದು ತೂಕ ಎಂಬ ಮಾತಿದೆ. ಆದರೆ ಇದಕ್ಕೆ ಅಪವಾದವೆಂಬಂತೆ ಕಲಾಪದಲ್ಲಿ ಭಾಗವಹಿಸಲು ಶಾಸಕರೊಬ್ಬರು ಒಬ್ಬಂಟಿಯಾಗಿ ಬಂದಿದ್ದು, ಇದನ್ನು ಕಂಡು ಭದ್ರತಾ ಸಿಬ್ಬಂದಿಯೇ ಅಚ್ಚರಿಗೊಳಗಾಗಿದ್ದಾರೆ.
ಇಂತಹದೊಂದು ಘಟನೆ ಬುಧವಾರದಂದು ವಿಧಾನಸೌಧದಲ್ಲಿ ನಡೆದಿದ್ದು, ಕಲಾಪದಲ್ಲಿ ಭಾಗವಹಿಸಲು ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಬಂದಿದ್ದಾರೆ. ಆ ಸಂದರ್ಭದಲ್ಲಿ ಪ್ರವೇಶ ದ್ವಾರದಲ್ಲಿ ಪೊಲೀಸರು ತಡೆದಿದ್ದು, ಚನ್ನಬಸಪ್ಪ, ನಾನು ಶಿವಮೊಗ್ಗ ಕ್ಷೇತ್ರದ ಎಂಎಲ್ಎ ಎಂದು ಪರಿಚಯಿಸಿಕೊಂಡಿದ್ದಾರೆ.
ಆಗ, ನಿಮ್ಮ ಜೊತೆಗೆ ಯಾರೂ ಇಲ್ಲವಲ್ಲ ಸರ್. ಒಬ್ಬರೇ ಬಂದಿದ್ದೀರಲ್ಲ. ಹಾಗಾಗಿ ಯಾರೋ ಎಂದುಕೊಂಡಿದ್ದೇವು ಎಂದು ಹೇಳಿದ ಮಹಿಳಾ ಪೊಲೀಸ್ ಬಳಿಕ ಚನ್ನಬಸಪ್ಪ ಅವರನ್ನು ಒಳಗೆ ಕಳುಹಿಸಿದ್ದಾರೆ. ಚನ್ನಬಸಪ್ಪ ಇದೇ ಮೊದಲ ಬಾರಿಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…