ಹೆದ್ದಾರಿಪುರದಲ್ಲಿ ವಿಕಸಿತ ಸಂಕಲ್ಪ ಯಾತ್ರೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ: ಮೋದಿ ನೇತೃತ್ವದ ಕೇಂದ್ರದ ಬಿಜೆಪಿ (BJP) ಸರ್ಕಾರ ಜಾರಿಗೊಳಿಸಿರುವ ಹತ್ತು ಹಲವು ಜನಹಿತ ಕಾರ್ಯಕ್ರಮಗಳು ದೇಶದ ಪ್ರತಿಯೊಬ್ಬ ನಾಗರೀಕನಿಗೆ ಸಮರ್ಪಕವಾಗಿ ತಲುಪುವಂತಾಗಬೇಕು ಎಂಬುದೇ ಈ ಸಂಕಲ್ಪ ಯಾತ್ರೆಯ ಉದ್ದೇಶವೆಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು.

ಹೆದ್ದಾರಿಪುರ ಗ್ರಾಮದಲ್ಲಿ ಆಯೋಜಿಸಲಾದ ವಿಕಸಿತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗದಂತೆ ಹೆಚ್ಚಿನ ಆರ್ಥಿಕ ನೆರವು ಬರುತ್ತಿತ್ತು ಆದರೆ ಇಂದಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಯಿಂದಾಗಿ ಅಭಿವೃದ್ದಿಗೆ ಅನುದಾನದ ಕೊರತೆಯಿಂದಾಗಿ ಕಾಮಗಾರಿಗಳು ಆರ್ಧಕ್ಕೆ ನಿಲ್ಲುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿ,
ಕ್ಷೇತ್ರದ ಮತದಾರರಿಗೆ ಉತ್ತರಿಸದಂತಾಗಿದೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಈ ಹಿಂದೆ ಕೇಂದ್ರ ಸರ್ಕಾರ ಯಾವುದೇ ಯೋಜನೆ ಅನುಷ್ಠಾನಗೊಳಿಸಿದರು ಕೂಡಾ ಮತದಾರರ ಕೈ ಸೇರುವುದು ಕೇವಲ ಹಣ ಮಧ್ಯವರ್ತಿಗಳ ಪಾಲಾಗುತ್ತಿತ್ತು ಅದರೆ ಮೋದಿ ಸರ್ಕಾರದಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಸೇರುತ್ತಿದೆ ಎಂದು ಹೇಳಿ ಬ್ಯಾಂಕ್‌ಗಳಲ್ಲಿ ಸಹ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡುತ್ತಿರುವುದರ ಬ್ಯಾಂಕ್ ಅಧಿಕಾರಿಗಳ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಆಧ್ಯಕ್ಷೆ ವಿನಂತಿ, ಉಪಾಧ್ಯಕ್ಷೆ ವನಿತಾ ಗಂಗಾಧರ, ಜಿಲ್ಲಾ ಬಿಜೆಪಿ ಆಧ್ಯಕ್ಷ ಟಿ.ಡಿ.ಮಘೇರಾಜ್, ತಾಲ್ಲೂಕ್ ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ಗ್ರಾಮ ಪಂಚಾಯ್ತಿ ಸದಸ್ಯರಾದ ವಿಶುಕುಮಾರ್, ಸಂತೋಷ, ಲಿಂಗರಾಜ್, ಪ್ರವೀಣ್, ಮಳವಳ್ಳಿ ಚಂದ್ರಶೇಖರ್, ಸುಮಿತ್ರ, ನಾಗರತ್ನ, ಷಣ್ಮುಖ ಮತ್ತು ಸುಜಾತ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ,ಬಿ.ಮಂಜುನಾಥ, ಕಲ್ಲೂರು ನಾಗೇಂದ್ರ, ಜಂಬಳ್ಳಿ ಗಿರೀಶ್, ಬಿಜೆಪಿ ಘಟಕದ ಅಧ್ಯಕ್ಷ ರಾಮಣ್ಣ ಹೆದ್ದಾರಿಪುರ ಇನ್ನಿತರರು, ಪಕ್ಷದ ಮುಖಂಡರು ಹಾಗೂ ಹೆದ್ದಾರಿಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಸಿಬ್ಬಂದಿ ವರ್ಗ ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

15 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

19 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

19 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

21 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

22 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago