ಶಿವಮೊಗ್ಗ: ಹೊಸದಾಗಿ ಖರೀದಿಸಿರುವ ಆಟೋ ರಿಕ್ಷಾಗಳಿಗೆ ಪರವಾನಗಿ ನೀಡಬೇಕೆಂದು ಆಗ್ರಹಿಸಿ ಆಟೋ ಚಾಲಕರ ಸಂಘ ಹಾಗೂ ಮಾಲೀಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಹೊಸ ಆಟೋ ರಿಕ್ಷಾಗಳಿಗೆ ನೋಂದಣಿ ಮಾಡಿಕೊಡಲಾಗುತ್ತದೆ. ಆದರೆ ಅದನ್ನು ಓಡಿಸಲು ಪರವಾನಗಿ ನೀಡುವುದನ್ನು ನಿಲ್ಲಿಸಲಾಗಿದೆ. ಹೊಸದಾಗಿ ನೋಂದಣಿಯಾಗಿರುವ ಆಟೋ ರಿಕ್ಷಾಗಳಿಗೆ ಪರವಾನಗಿ ಇರುವುದಿಲ್ಲ. ಇದರಿಂದ ಕಷ್ಟಪಟ್ಟು ಆಟೋ ರಿಕ್ಷಾ ಖರೀದಿ ಮಾಡಿದವರಿಗೆ ಜೀವನ ಸಾಗಿಸುವುದೇ ಕಷ್ಟವಾಗುತ್ತಿದೆ. ಜೊತೆಗೆ ಸಾಲ ಮಾಡಿ ನಾವು ಆಟೋ ಖರೀದಿ ಮಾಡಿದ್ದೇವೆ. ಸುಮಾರು ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಈ ರೀತಿಯ ಪರವಾನಗಿ ಇಲ್ಲದ ಆಟೋಗಳಿವೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಸಾಲದ ಕಂತುಗಳನ್ನು ಕಟ್ಟಲು ನಮಗೆ ಕಷ್ಟವಾಗುತ್ತಿದೆ. ಪರವಾನಗಿ ಇಲ್ಲದೇ ಆಟೋ ಓಡಿಸುವುದೇ ಕೂಡ ತುಂಬಾ ಅಪಾಯಕಾರಿಯಾಗಿರುತ್ತದೆ. ಈ ಬಗ್ಗೆ ಹಲವು ಬಾರಿ ನಾವು ಮನವಿ ಮಾಡಿದ್ದರೂ ಸಾರಿಗೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿಲ್ಲ. ಆದ್ದರಿಂದ ಹೊಸದಾಗಿ ಖರೀದಿಸಿರುವ ಆಟೋಗಳಿಗೆ ಪರವಾನಗಿ ಕೊಡಬೇಕೆಂದು ಮನವಿ ಮಾಡಲಾಗಿದೆ.
ಈ ಬಗ್ಗೆ ಶಾಸಕರು ಕೂಡ ಸಾರಿಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೂ, ಪರವಾನಗಿ ನೀಡಿಲ್ಲ ಎಂದು ಆಟೋ ಚಾಲಕರು ದೂರಿದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…