ಹೊಸನಗರ : ತಾಲ್ಲೂಕಿನ ಹೊಸನಗರ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಡಾ. ಪಿ. ಶಾಂತರಾಮ್ ಪ್ರಭು ವೇದಿಕೆಯಲ್ಲಿ ಜನವರಿ 4 ಗುರುವಾರ ಹೊಸನಗರ ತಾಲ್ಲೂಕು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಲಿದೆ ಎಂದು ಹೊಸನಗರ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ನಗರ ರಾಘವೇಂದ್ರ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ತಾಲ್ಲೂಕಿನ 41 ಪ್ರೌಢ ಶಾಲೆ ವಿದ್ಯಾರ್ಥಿಗಳು ಹಾಗೂ 7ನೇ ತರಗತಿ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಕ್ಷೇತ್ರ ಶಿಕ್ಷಣಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಪಾಲ್ಗೋತ್ತಿದ್ದಾರೆ.
ಕ್ಷೇತ್ರದ ಶಾಸಕರಾದ ಬೆಳೂರು ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿ ಮಂಜುನಾಥ, ಕಸಾಪ ಅಧ್ಯಕ್ಷ ತ.ಮ. ನರಸಿಂಹ, ಜಾನಪದ ಪರಿಷತ್ ಅಧ್ಯಕ್ಷ ಪರಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುರುರಾಜ್ ಪರಿಸಾರ ಪ್ರೇಮಿ ನಿಂಗಮೂರ್ತಿ, ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಸಮ್ಮೇಳನ ನಡೆಯಲಿದೆ.
ಬೆಳ್ಳಿಗೆ 9:30 ಕ್ಕೆ ಸಮ್ಮೇಳನಾಧ್ಯಕ್ಷರು ಹಾಗೂ ಕಾರ್ಯಕ್ರಮ ಉದ್ಘಾಟಕರನ್ನು ಶ್ರೀ ಗಂಗಾಧರೆಶ್ವರ ದೇವಸ್ಥಾನದಿಂದ ಚರ್ಮ ವಾದ್ಯಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಗುವುದು, ಸಾರ್ವಜನಿಕರು, ಸಾಹಿತ್ಯ ಆಸಕ್ತರು, ಕನ್ನಡ ಪರ ಸಂಘಟನೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಬೇಕಾಗಿ ತಿಳಿಸಿದ್ದಾರೆ.
ಗೋಷ್ಠಿಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗುರುರಾಜ್, ಮುಖ್ಯ ಶಿಕ್ಷಕ ಕುಬೇಂದ್ರಪ್ಪ, ಎಂ.ಕೆ ವೆಂಕಟೇಶ್ ಮೂರ್ತಿ, ಮಾಸ್ತಿಕಟ್ಟೆ ವಾಸಪ್ಪ, ಗೌತಮ್ ಆಚಾರ್ಯ, ಪ್ರಕಾಶ್ ಸೇರಿದಂತೆ ಕ.ಸಾ.ಸ. ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…
ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…
ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…
ರಿಪ್ಪನ್ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…