ಹೊಸನಗರ : ವಿಶೇಷ ಚೇತನ ಮಕ್ಕಳು ಶಾಪಗ್ರಸ್ಥರಲ್ಲ. ಅವರು ಸಮಾಜದ ಮುಖ್ಯವಾಹಿನಿಯಿಂದ ಹೊರಗುಳಿಯಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿಶೇಷ ಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ಮಗು ದೈಹಿಕ ಅಥವಾ ಮಾನಸಿಕ ನ್ಯೂನತೆಯೊಂದಿಗೆ ಜನಿಸಿದಾಗ ಪೋಷಕರು ದೃತಿಗೆಡಬಾರದು. ಬದಲಾಗಿ ಅಂತಹ ಮಗುವಿನ ಆರೈಕೆ, ಆತ್ಮಸ್ಥೈರ್ಯ ತುಂಬಲು ಪ್ರಯತ್ನ ಪಡಬೇಕು. ಯಾವ ಕೊರೆತೆಯ ಅನುಭವವೂ ಮಗುವಿಗೆ ಆಗದಂತೆ ಬೆಳೆಸುವುದು ಪೋಷಕರ ಕರ್ತವ್ಯ ಎಂದು
ಸರ್ಕಾರ ವಿಕಲಚೇತನ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗಪಡಿಸಿಕೊಳ್ಳಲು ಪೋಷಕರು ಮುಂದಾಬೇಕು. ವಿಶೇಷಚೇತನರಾಗಿ ಹುಟ್ಟಿಯೂ ಹಲವು ಸಾಧನೆಗೈದ ಪ್ರತಿಭೆಗಳು ಇಂತಹ ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಅಂತಹ ವಾತಾವರಣವನ್ನು ಕಲ್ಪಿಸುವ ಹೊಣೆಗಾರಿಕೆ ಶಿಕ್ಷಕರು ಹಾಗೂ ಪೋಷಕರ ಮೇಲಿದ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಮಾತನಾಡಿ, ಸಹಜವಾಗಿ ಕಲಿಯಲು ತೊಂದರೆ ಅನುಭವಿಸುವ ವಿಶೇಷಚೇತನ ಮಕ್ಕಳಿಗೆ ವಿಶೇಷ ಮಾದರಿಯಲ್ಲಿ ಶಿಕ್ಷಣ ನೀಡಬೇಕಾಗುತ್ತದೆ. ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಸಾಕಷ್ಟು ನ್ಯೂನತೆಗಳನ್ನು ಸರಿಪಡಿಸಲು ಅವಕಾಶವಿರುತ್ತದೆ. ವಿಶೇಷಚೇತನ ಮಗುವಿಗೆ ಅನುಕಂಪ ತೋರುವ ಬದಲು ಅವರ ನೆರವಿಗೆ ಹೇಗೆ ಧಾವಿಸಬಹುದು ಎನ್ನುವುದನ್ನು ಪೋಷಕರು ಅರಿಯಬೇಕು. ನ್ಯೂನತೆಯು ಮಕ್ಕಳ ದೌರ್ಬಲ್ಯ ಆಗದಂತೆ ಎಚ್ಚರವಹಿಸಬೇಕು. ಸಮಾಜದ ಮುಖ್ಯ ವಾಹಿನಿಯಲ್ಲಿ ಅವರು ಎಲ್ಲರಂತೆ ಬಾಳುವ ವಾತಾವರಣ ನಿರ್ಮಾಣ ಆಗಬೇಕು ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ನಾಗಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್, ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಪ್ರಮುಖರಾದ ಮಾನಸ, ಮಂಜುಳ, ದೀಪಾ, ಲಿಲ್ಲಿ ಡಿಸೋಜಾ, ನಾಗೇಶ್, ಕುಬೇರಪ್ಪ, ಚಂದ್ರಕಾಂತ್, ಎಚ್.ಆರ್.ಉಮೇಶ್ ಮತ್ತಿತರರು ಇದ್ದರು.
ವಿಶೇಷ ಚೇತನ ಮಕ್ಕಳಿಗಾಗಿ ಏರ್ಪಡಿಸಿದ್ದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…