ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ! ಕೊಡಚಾದ್ರಿ ಚಿಟ್ಸ್ ಫಂಡ್ ನೌಕರರಿಂದ ವ್ಯಕ್ತಿ ಮೇಲೆ ಹಲ್ಲೆ

ಹೊಸನಗರ: ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ಸ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ.

ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಏನಿದು ಘಟನೆ ?

ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ಸ್ ಫಂಡ್ ಕಂಪನಿಯ ಏಜೆಂಟ್ ಒಬ್ಬರು ಒಬ್ಬ ವ್ಯಕ್ತಿಯ ಬಳಿ ಚೀಟಿ ಹಾಕುವಂತೆ ಪ್ರಮೋಷನ್ ನೀಡಲು ಹೋಗಿದ್ದಾರೆ ಈ ಸಂದರ್ಭದಲ್ಲಿ ಆನ್‌ಲೈನ್ ಲೋನ್ ಆಪ್ ಮೂಲಕ ಸಾಕಷ್ಟು ಹಣ ಕಳೆದುಕೊಂಡಿದ್ದ ವ್ಯಕ್ತಿ ಇದೆಲ್ಲಾ ಮೋಸ ಹಾಗೇ ಹೀಗೆ ಎಂದು ಮಾತನಾಡಿ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಚಿಟ್ಸ್ ಫಂಡ್ ಕಂಪನಿಯ ಎಲ್ಲಾ ನೌಕರರಿಗೆ ಮಾಹಿತಿ ತಿಳಿದು ನ್ಯಾಯಾಲಯದ ಮುಂಭಾಗದಲ್ಲಿ ಆ ವ್ಯಕ್ತಿಯ ಮೇಲೆ ಏಕಾಏಕಿ ಹಲ್ಲೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಅಲ್ಲಿದ್ದ ಹಿರಿಯ ಪತ್ರಕರ್ತರೊಬ್ಬರು ಘಟನೆಯ ವಿಡಿಯೋ ಚಿತ್ರೀಕರಿಸಲು ಮುಂದಾದಾಗ ಅವರ ಮೊಬೈಲ್ ಕಸಿದುಕೊಂಡು ಯಾಕೆ ವೀಹಡಿಯೋ ಮಾಡ್ತೀಯಾ ? ಎಂದು ಧಮ್ಕಿ ಹಾಕಿದ್ದಾರೆ.

ಸದ್ಯ ಈಗ ಪ್ರಕರಣ ಹೊಸನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಚಿಟ್ಸ್ ಫಂಡ್ ನೌಕರನ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿ ಹಾಗೂ ಕಾನೂನನ್ನು ಮರೆತು ಏಕಾಏಕಿ ಹಲ್ಲೆಗೆ ಮುಂದಾಗಿ ನೈತಿಕ ಪೊಲೀಸ್ ಗಿರಿ ಮೆರೆದ ಸಂಸ್ಥೆಯ ನೌಕರರ ಮೇಲೆ ಏನು ಕ್ರಮವಾಗುತ್ತೋ ಕಾದು ನೋಡಬೇಕಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

23 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago