ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ

0 562

ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌.

ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ ನಿರ್ದೇಶಕರು, ಗೃಹ ರಕ್ಷಕ ದಳದ ಮಹಾ ಸಮಾದೇಷ್ಟರು, ರಾಜ್ಯ ವಿಪತ್ತು ಸ್ಪಂದನಾ ಪಡೆ ಹಾಗೂ ಪೌರ ರಕ್ಷಣ ನಿರ್ದೇಶಕರು ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ರವರು ರಮೀಜ್’ರಾಜ ಶೇಖ್ ರವರನ್ನು ಪ್ರಶಂಷನ ಪತ್ರ ನೀಡಿ ಅಭಿನಂದಿಸಿ ಅಂತರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸಿ ಉತ್ತಮ ಸಾಧನೆ ಗಳಿಸುವಂತೆ ಅವರು ಹಾರೈಸಿದ್ದಾರೆ.

ಹೊಸನಗರ ಅಗ್ನಿಶಾಮಕ ದಳ ಠಾಣೆಯ ಸಿಬ್ಬಂದಿ ವರ್ಗದವರು ಅವರ ಸಾಧನೆಗಾಗಿ ಅಭಿನಂದಿಸಿದ್ದಾರೆ.

Leave A Reply

Your email address will not be published.

error: Content is protected !!