ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ‌ ಡಿ.22ಕ್ಕೆ ‘ಹೊಸನಗರ ನಮ್ಮೂರು’ ಪುಸ್ತಕ ಪರಿಚಯ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ

0 448

ಹೊಸನಗರ : ರಾಜ್ಯ ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಹಾಗೂ ತಾಲೂಕು ಸಮಿತಿ ಆಶ್ರಯದಲ್ಲಿ ಡಿಸೆಂಬರ್ 22ರ ಶುಕ್ರವಾರ ಬೆಳಗ್ಗೆ 10-30ಕ್ಕೆ ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಹಿರಿಯ ಸಾಹಿತಿ, ಲೇಖಕ, ತುಮಕೂರಿನ ಡಾ. ಎಸ್.ಪಿ. ಪದ್ಮಪ್ರಸಾದ್ ರಚಿತ ‘ನಮ್ಮೂರು ಹೊಸನಗರ’ ಪುಸಕ್ತ ಪರಿಚಯ ಹಾಗೂ ‘ಹೊಸನಗರ ಜಾನಪದ ಒಳನೋಟ’ ಎಂಬ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಹಾಗೂ ಜಾನಪದ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಆಶಯ ನುಡಿಯಲ್ಲಿದ್ದಾರೆ.

ಕಾಲೇಜಿನ ಪ್ರಾಚಾರ್ಯ ಡಾ. ಕೆ. ಉಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪಂಚಾಯತ್‌ರಾಜ್ ಪರಿಷತ್ತು ನೀಡುವ ಡಾ. ಚಿಕ್ಕಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಭಾಜನರಾದ ಶಿವಮೊಗ್ಗ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ, ‘ಸೋಲಿಲ್ಲದ ಸರದಾರ’ ಪ್ರಶಸ್ತಿ ಪುರಸ್ಕೃತ ಕಲಗೋಡು ರತ್ನಾಕರ್ ಅವರನ್ನು ಪರಿಷತ್ತು ಸನ್ಮಾನಿಸಲಿದೆ.

ಮುಖ್ಯ ಅತಿಥಿಗಳಾಗಿ ತಾಲೂಕು ಕಜಾಪ ಅಧ್ಯಕ್ಷ ಎಂ.ಎಂ. ಪರಮೇಶ್, ವಿಶ್ರಾಂತ ಪ್ರಾಚಾರ್ಯ ಡಾ. ಮಾರ್ಷಲ್ ಶರಾವೋ, ತಾಲೂಕ ಕಸಾಪ ಅಧ್ಯಕ್ಷ ತ.ಮ. ನರಸಿಂಹ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಾಲಗದ್ದೆ ಉಮೇಶ್, ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಾಮತ್, ತಾಲೂಕು ಕಸಾಪ ಪ್ರಧಾನ ಕಾಯದರ್ಶಿ ವಿಜೇಂದ್ರ ಶೇಟ್ ಭಾಗವಹಿಸಲಿದ್ದಾರೆ.

ಹೊಸನಗರ ಜಾನಪದ ಒಳನೋಟ ವಿಚಾರ ಸಂಕಿರಣದಲ್ಲಿ ‘ಹೊಸನಗರ ಜಾನಪದ ಮಹತ್ವ’ ವಿಷಯ ಕುರಿತಂತೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಉಪನ್ಯಾಸಕ ಡಾ. ರತ್ನಾಕರ್ ಸಿ ಕುನುಗೋಡು, ‘ಹೊಸನಗರ ಐತಿಹಾಸಿಕ ತಾಣಗಳು’ ವಿಷಯ ಕುರಿತು ಶಿವಮೊಗ್ಗ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ.ಜಿ. ವೆಂಕಟೇಶ್ ಮಾತನಾಡಲಿದ್ದರೆ.

ಸಾಹಿತಿ ನಾಗರಕೊಡಿಗೆ ಗಣೇಶ್ ಮೂರ್ತಿ, ಕೊಡಚಾದ್ರಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ. ಶ್ರೀಪತಿ ಹಳಗುಂದ, ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ನಗರ ರಾಘವೇಂದ್ರ, ಹಾಗೂ 4ನೇ ಜಾನಪದ ಸಮ್ಮೇಳನಾಧ್ಯಕ್ಷ ಬಟ್ಟೆಮಲ್ಲಪ್ಪ ಆಂಜನೇಯ ಜೋಗಿ ಉಪಸ್ಥಿತರಿರುವರು.

ಈ ವೇಳೆ ‘ನಮ್ಮೂರು ಹೊಸನಗರ’ ಪುಸಕ್ತ ಶೇ.50 ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಏರ್ಪಾಡು ಮಾಡಲಾಗಿದ್ದು, ಸಾಹಿತ್ಯಾಸಕ್ತರು ಪುಸ್ತಕ ಕೊಂಡು ಓದುವ ಹವ್ಯಾಸ ರೂಡಿಸಿಕೊಳ್ಳುವ ಮೂಲಕ ಸಹಕರಿಸಬೇಕೆಂದು ಲೇಖಕ ಡಾ. ಎಸ್.ಪಿ.ಪದ್ಮಪ್ರಸಾದ್ ವಿನಂತಿಸಿದ್ದಾರೆ.

Leave A Reply

Your email address will not be published.

error: Content is protected !!