ಹೊಸನಗರ ಗಂಗಾಧೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸಾಮೂಹಿಕ ಸಂಕಲ್ಪ, ರುದ್ರಾಭಿಷೇಕ, ಭಕ್ತರಿಂದ ವಿಶೇಷ ಪೂಜೆ
ಹೊಸನಗರ: ಪಟ್ಟಣದ ಮಾವಿನಕೊಪ್ಪದಲ್ಲಿರುವ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಪೂಜಾ ಗಂಗಾಧರೇಶ್ವರ ಹಾಗೂ ಪರಿವಾರ ದೇವರುಗಳ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆದಿದ್ದು ಭಕ್ತ ಸಾಗರವೇ ಹರಿದು ಬಂದಿದ್ದು ದೇವರಿಗೆ ವಿಶೇಷ ಪೂಜಾ ಕಾರ್ಯ ನಡೆಯಿತು.
ಬೆಳಿಗ್ಗೆ 6ಗಂಟೆಗೆ ಮಹಾ ಶಿವರಾತ್ರಿಯ ಪ್ರಯುಕ್ತ ಶ್ರೀ ಗಂಗಾಧರೇಶ್ವರ ದೇವರಿಗೆ ದೇವಸ್ಥಾನದ ಅರ್ಚಕರು ಹಾಗೂ 6ಜನರ ಪೂರೋಹಿತ್ಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಸಲಾಯಿತು.
ಸಂಜೆ 6 ಗಂಟೆಯಿಂದ ಗಂಗಾಧರೇಶ್ವರ ದೇವರ ಸನ್ನಿಧಿಯಲ್ಲಿ ಸಂಕಲ್ಪ, ಶ್ರೀ ರುದ್ರಾಭಿಷೇಕ ನಂತರ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದಿದ್ದು ರಾತ್ರಿ ದೇವಸ್ಥಾನದ ಆವರಣದಲ್ಲಿ ಹಾಕಿರುವ ಭವ್ಯ ರಂಗ ಸಜ್ಜಿಕೆಯಲ್ಲಿ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಮೇಳ ಇವರಿಂದ ಶಿವರಾತ್ರಿ ಜಾಗರಣೆ ಪ್ರಯುಕ್ತ ‘ಮಂತ್ರ ಮಾಂಗಲ್ಯ’ ಯಕ್ಷಗಾನ ಬಯಲಾಟ ನಡೆಯಲಿದೆ.
ಈ ದೇವರ ಸನ್ನಿಧಿಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ದೇವರ ಭಕ್ತಾರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಲು ಕಾರಣರಾದ ದೇವಸ್ತಾನ ಕಮಿಟಿಯ ಕಾರ್ಯಕಾರಿ ಸಮಿತಿಯ ಸದಸ್ಯರುಗಳಿಗೆ ಹಾಗೂ ಭಕ್ತರಿಗೆ ಗಂಗಾಧರೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷರಾದ ನಾಗರಾಜ್ ಕಾಮತ್ರವರು ಅಭಿನಂದಿಸಿದ್ದಾರೆ.