ಹೊಸನಗರ ; ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ಹೊಸನಗರ: ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು (Tobacco) ನಿಯಂತ್ರಣ ಕಾಯ್ದೆಯನ್ವಯ ಹೊಸನಗರ (Hosanagara) ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ.

ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ ಸರ್ಕಾರಗಳು ಜನಪ್ರತಿನಿಧಿಗಳು ಎಷ್ಟೇ ಹೇಳಿದರೂ ತಂಬಾಕು ಸೇವಿಸುವವರು ಕಡಿಮೆ ಮಾಡುತ್ತಿಲ್ಲ. ಇದರಿಂದ ನಿಮ್ಮ ದೇಹ ಸುಡುವುದರ ಜೊತೆಗೆ ಎಷ್ಟೋ ಸಂಸಾರಗಳು ಬೀದಿಗೆ ಬಂದಿದೆ. ಯಜಮಾನನಿಲ್ಲದ ಮನೆ ದೇವರಿಲ್ಲದ ಗುಡಿಯಂತೆ‌. ಮನೆಯ ಯಜಮಾನನ್ನು ಕಳೆದುಕೊಂಡಂತಾಗುತ್ತದೆ. ತಂಬಾಕು ಸೇವೆಯಿಂದ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಾರೆ. ಈ ತಂಬಾಕು ಮನುಷ್ಯರ ದೇಹಕ್ಕೆ ಹಲವಾರು ಕಾಯಿಲೆಗೆ ನಾವೇ ಆಹ್ವಾನ ನೀಡಿದಂತಾಗುತ್ತದೆ. ಮನೆಯ ಯಜಮಾನ ತಂಬಾಕು ಸೇವನೆಯಿಂದ ಮುಕ್ತಿ ಹೊಂದಿದರೇ ಇಡೀ ಕುಟುಂಬವೇ ಸುಖ ಸಂತೋಷದಿಂದ ಇರಬಹುದು. ಆದ್ದರಿಂದ, ತಂಬಾಕಿನಿಂದ ಮುಕ್ತಿ ಹೊಂದಿ ಜೊತೆಗೆ ಮಾರಾಟಗಾರರು ತಂಬಾಕು ಮಾರಾಟ ಮಾಡದಿದ್ದರೆ ಹೊಸನಗರ ತಾಲ್ಲೂಕು ತಂಬಾಕು ಮುಕ್ತ ತಾಲ್ಲೂಕಾಗಿ ಮಾಡಬಹುದು‌‌. ಆದ್ದರಿಂದ ಎಲ್ಲ ಅಂಗಡಿ ಮಾಲೀಕರು ನಮ್ಮೊಂದಿಗೆ ಕೈಜೋಡಿಸಿ ತಂಬಾಕು ಮುಕ್ತ ಹೊಸನಗರ ಮಾಡಲು ಸಹಕರಿಸಿ ಎಂದರು.

ಈ ದಾಳಿಯ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಾರ್ಯಕರ್ತ ರವಿರಾಜ್ ಜಿ.ಕೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಮೇಶ್ ಆಚಾರ್, ಕ್ಷಯರೋಗ ನಿಯಂತ್ರಣ ಮೇಲ್ವಿಚಾರಕ ಚಂದ್ರಪ್ಪ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಪೊಲೀಸ್ ಇಲಾಖೆಯ ವಸಂತ್ ಹಾಗೂ ಪಿಹೆಚ್‌ಸಿಓ ಗೀತಾ, ಬಿ.ಪಿ.ಎಂ ನಿಕೀತ್‌ರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago