ರಿಪ್ಪನ್ಪೇಟೆ: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ನಾಲ್ವರ ಹೆಸರು ಮುನ್ನಲೆಗೆ ಬಂದಿದೆ.
ಈಗಾಗಲೇ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿ ಶಾಸಕ ಹರತಾಳು ಹಾಲಪ್ಪ ಮತ್ತು ಆರಗ ಜ್ಞಾನೇಂದ್ರ ಜೊತೆ ಒಡನಾಟ ಹೊಂದಿರುವ ಆಲವಳ್ಳಿ ವೀರೇಶ್ ಮತ್ತು ಪಕ್ಷದ ಸಕ್ರಿಯಾರಾಗಿರುವ ಎಂ.ಎನ್.ಸುಧಾಕರ ಮತ್ತು ಹುಂಚ ಹೋಬಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಎಲೆಮರೆಯ ಕಾಯಿಯಂತೆ ಕಾರ್ಯನಿರ್ವಹಿಸಿ ತಾಲ್ಲೂಕು ಬಿಜೆಪಿಯಲ್ಲಿ ಪ್ರಮುಖ ಹುದ್ದೆಯಲ್ಲಿರುವ ಕಲ್ಲೂರು ನಾಗೇಂದ್ರ ಇದರೊಂದಿಗೆ ಕಸಬಾ ಹೋಬಳಿ ವ್ಯಾಪ್ತಿಯ ಯುವಕ ಚಿಕ್ಕಮಣತಿ ಶಿವಾನಂದ ಹಾಗೂ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನಸ್ವಾಮಿ ಸೇರಿದಂತೆ ಇಂದು ಮತ್ತೊಂದು ಹೆಸರು ಸಹ ಕೇಳಿ ಬರಲಾರಂಭಿಸಿದ್ದು ಈಗಾಗಲೇ ಕೆರೆಹಳ್ಳಿ, ಹುಂಚ ಬಿಜೆಪಿ ಮಹಾಶಕ್ತಿ ಕೆಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ್ ಸಹ ನಾನು ಆಕಾಂಕ್ಷಿಯೆನ್ನುವುದರೊಂದಿಗೆ ಒಟ್ಟಾರೆಯಾಗಿ ಅಧ್ಯಕ್ಷ ಗಾದಿಗೆ ಹನುಮಂತನ ಬಾಲದಂತೆ ಹೆಸರುಗಳು ಬೆಳೆದಿದೆ.
ಒಂದು ಕಡೆಯಲ್ಲಿ ವೀರೇಶ್ ಆಲವಳ್ಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರೊಂದಿಗೆ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಮತ್ತು ಆರಗ ಜ್ಞಾನೇಂದ್ರ ಜೊತೆ ಒಡನಾಟದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಾರಣ ಅದೃಷ್ಟ ಇವರಿಗೆ ದೊರೆಯುವುದೋ ಎಂಬ ಸ್ಪಷ್ಟ ಲಕ್ಷಣ ಗೋಚರಿಸಲಾರಂಭಿಸಿದರೆ, ಅವರಂತೆ ಹರತಾಳು ಹಾಲಪ್ಪ ಮತ್ತು ಆರಗ ಜ್ಞಾನೇಂದ್ರರ ಕೃಫೆ ಯಾರ ಮೇಲಿದೆಯೋ ಅವರಿಗೆ ಅದೃಷ್ಟ ಕುಲಾಯಿಸುತ್ತದೆಂದು ಹಲವು ಕಾರ್ಯಕರ್ತರ ಅಭಿಪ್ರಾಯವಾಗಿದೆ.
ಒಟ್ಟಾರೆಯಾಗಿ ಸದಾ ಸುದ್ದಿಯಲ್ಲಿರುವ ತಾಲ್ಲೂಕು ಬಿಜೆಪಿ ಅಧ್ಯಕ್ಷ ಗದ್ದುಗೆ ಈ ಬಾರಿಯಲ್ಲಿ ವೀರೇಶ್ ಆಲವಳ್ಳಿಗೋ ಆಥವಾ ಇನ್ನಾರಿಗೋ ಎಂಬ ಕುತೂಹಲ ಕಾರ್ಯಕರ್ತರಲ್ಲಿ ಮನೆ ಮಾಡಿದೆ.
ಎರಡ್ಮೂರು ದಿನಗಳಿಂದ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಯ್ಕೆಗೆ ಸಾಕಷ್ಟು ಹೆಸರುಗಳನ್ನು ಹರಿದಾಡುತ್ತಿದ್ದು ಪಕ್ಷದ ಮುಖಂಡರು ಯಾರಿಗೆ ಮನ್ನಣೆ ನೀಡುವರು ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…