ಹೊಸನಗರ ತುಂಗಾ ಅಡಿಕೆ ಮಾರಾಟ ಸೌಹಾರ್ದ ಸಹಕಾರಿ ಸಂಘಕ್ಕೆ ₹ 29.71 ಲಕ್ಷ ನಿವ್ವಳ ಲಾಭ | ಸಹಕಾರಿ ಸಂಘ ನಷ್ಟವಾಗಿದೆ ಎಂದು ಎದೆಗುಂದಬಾರದು ; ವಿನಯ್ ಕುಮಾರ್ ದುಮ್ಮ


ಹೊಸನಗರ: ಯಾವುದೇ ಸಹಕಾರಿ ಸಂಘಗಳು ಒಂದೆರಡು ವರ್ಷ ನಷ್ಟವಾಯಿತು ಎಂದು ಎದೆಗುಂದದೆ ನಿಷ್ಠೆಯಿಂದ ಕೆಲಸ ಮಾಡಿದಾಗ ಮುಂದಿನ ದಿನದಲ್ಲಿ ಲಾಭಾಂಶ ಕಾಣಬಹುದು ಎಂದು ತುಂಗಾ ಅಡಿಕೆ ಮಂಡಿಯ ಅಧ್ಯಕ್ಷ ವಿನಯ್ ಕುಮಾರ್ ದುಮ್ಮರವರು ಹೇಳಿದರು.


ಹೊಸನಗರ ಎಪಿಎಂಸಿ ಯಾರ್ಡ್ ಆವರಣದಲ್ಲಿ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು ತುಂಗಾ ಅಡಿಕೆ ಮಂಡಿಯನ್ನು ಪ್ರಾರಂಭಿಸಿದಾಗ ನಾಲ್ಕು ವರ್ಷಗಳ ಕಾಲ ನಷ್ಟದಲ್ಲಿ ನಡೆಸಿಕೊಂಡು ಬಂದಿದ್ದೇವೆ ಅಂದು ನಷ್ಟವಾಯಿತು ಎಂದು ಮುಚ್ಚಿದ್ದರೆ ಈಗ ಈ ಲಾಭಾಂಶ ಬರುತ್ತಿರಲಿಲ್ಲ ನಾವು ಎರಡು ವರ್ಷಗಳಿಂದ ಲಾಭಾಂಶಗಳಿಸುತ್ತಾ ಬರುತ್ತಿದ್ದು ಈ ವರ್ಷ 29,71,611ರೂಪಾಯಿಗಳಷ್ಟು ಲಾಭಗಳಿಸಿದ್ದೇವೆ ನಮ್ಮ ಸಂಸ್ಥೆ ಉಳಿಸಲು ಬೆಳೆಸಲು ಸಹಕಾರಿ ಧುರೀಣ ಆರ್.ಎಂ. ಮಂಜುನಾಥ್ ಗೌಡ ಹಾಗೂ ಸಂಘದ ಸದಸ್ಯರ ಪಾತ್ರ ಹಿರಿದಾಗಿದೆ ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಾಭಾಂಶಗಳಿಸುವುದರ ಜೊತೆಗೆ ನಮ್ಮದೇ ಆದಾ ಸ್ವಂತ ಬಿಲ್ಡಿಂಗ್ ಕಟ್ಟುವ ಯೋಜನೆ ಹಾಗೂ ಸದಸ್ಯರಿಗೆ ಡಿವಿಡೆಂಟ್ ನೀಡುವ ಯೋಜನೆ ಹೊಂದಿದ್ದು ಸದಸ್ಯರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.


ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಸಹಕಾರಿ ದುರೀಣರಾದ ಆರ್.ಎ. ಮಂಜುನಾಥ ಗೌಡರವರು ಉದ್ಘಾಟಿಸಿ ಮಾತನಾಡಿ ಯಾವುದೇ ಸಹಕಾರಿ ಸಂಸ್ಥೆ ಬೆಳೆಯಬೇಕಾದರೆ ಹಸಿವು ಇರಬೇಕು ಮಾಡುವ ಛಲವಿರಬೇಕು ಅದು ತುಂಗಾ ಅಡಿಕೆ ಮಂಡಿಯ ಅಧ್ಯಕ್ಷ ವಿನಯ್ ಕುಮಾರ್‌ರವರಲ್ಲಿತ್ತು ಇವರ ಛಲದಿಂದ ಈ ಸಂಸ್ಥೆ ಲಾಭಾಂಶಗಳಿಸುವುದರಲ್ಲಿ ಯಶಸ್ವಿಯಾಗಿದೆ ಎಂದರು.


ಹೊಸನಗರ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ ಭೂಮಿ ತಾಯಿಗೆ ಹಾಕಿದ ಬಂಡವಾಳ ಎಲ್ಲಿಗೂ ಹೋಗುವುದಿಲ್ಲ ನಮ್ಮ ರೈತರು ಭೂಮಿಯನ್ನು ನಂಬಿ ಬದುಕುತ್ತಿದ್ದೂ ಅವರಿಗೆ ಇನ್ನೂ ಹೆಚ್ಚಿನ ಫಸಲು ನೀಡಲೀ ಎಂದು ಹಾರೈಸಿದರು.


ಈ ಸಭೆಯಲ್ಲಿ ತುಂಗಾ ಅಡಿಕೆ ಮಂಡಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರಸ್ವಾಮಿ, ಉಪಾಧ್ಯಕ್ಷರಾದ ಮಾಲತೀಶ್, ದಿನೇಶ್, ನಾಗೇಶ್, ಜಿ.ಎಸ್ ರವಿ, ಜಯದೇವಪ್ಪ, ನವೀನ್‌ಕುಮಾರ್, ಮಹೇಶ್, ಸುಧೀರ್ ಕುಮಾರ್, ಬಷೀರ್ ಅಹಮ್ಮದ್, ಲೇಖನಮೂರ್ತಿ, ವಿನಾಯಕ, ವೀರಮ್ಮ, ಹೇಮಾ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago