ಹೊಸನಗರ ದುರ್ಗಾಂಬಾ ದೇವಸ್ಥಾನದಲ್ಲಿ ಮಾ.25ರಂದು ವರ್ಧಂತ್ಯೋತ್ಸವ, ಸಾರ್ವಜನಿಕ ಅನ್ನಸಂತರ್ಪಣೆ
ಹೊಸನಗರ: ಪಟ್ಟಣದ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಾ. 25ರ ಸೋಮವಾರ ಬೆಳಿಗ್ಗೆಯಿಂದ ಗ್ರಾಮ ದೇವತೆ ದುರ್ಗಾಂಬಾ ವರ್ಧಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಹೆಚ್.ಎನ್ ಶ್ರೀಪತಿರಾವ್ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಶ್ರೀ ದುರ್ಗಾಂಬಾ ಮತ್ತು ನಾಗದೇವರಿಗೆ ಕಲಾಹೋಮ, ಕಲಶಾಭಿಷೇಕ, ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು ಮಧ್ಯಾಹ್ನ 12:30ಕ್ಕೆ ಪೂರ್ಣಾಹುತಿ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಮಸ್ತ ಭಕ್ತಾದಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ದೇವತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಹೇಳಿಕೊಂಡಿದ್ದಾರೆ.