ಹೊಸನಗರ ನ್ಯಾಯಾಲಯದಲ್ಲಿ ಹುತಾತ್ಮರ ದಿನಾಚರಣೆ

ಹೊಸನಗರ : ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಇಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.

ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡಿ ಹಾಗೂ ನ್ಯಾಯಾಲಯ ಸಂಕೀರ್ಣವನ್ನು ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಹಿರಿಯ ವ್ಯವಹಾರ ನ್ಯಾಯಾಧೀಶ ಎಂ ಎಸ್ ಸಂತೋಷ್, ನ್ಯಾಯಾಧೀಶ ಕೆ ರವಿಕುಮಾರ್, ಸರ್ಕಾರಿ ಅಭಿಯೋಜಕ ರವಿ ಕೆ, ವಕೀಲರ ಸಂಘದ ಅಧ್ಯಕ್ಷ ವಾಲೆಮನೆ ಶಿವಕುಮಾರ್, ವಕೀಲರುಗಳು ನ್ಯಾಯಾಲಯದ ಕಚೇರಿ ಸಿಬ್ಬಂದಿಗಳು ಪಂಚಾಯತಿಯ ಸಿಬ್ಬಂದಿ ಲಕ್ಷ್ಮಣ್ ಹಾಗೂ ಪೌರಕಾರ್ಮಿಕರಗಳ ನೆರವಿನಿಂದ ನ್ಯಾಯಾಲಯ ಸಂಕೀರ್ಣವನ್ನು ಸ್ವಚ್ಛತಾ ಅಭಿಯಾನದಲ್ಲಿ ಬಳಸಿಕೊಳ್ಳಲಾಗಿತ್ತು.

ಹಿರಿಯ ವ್ಯವಹಾರ ನ್ಯಾಯಾಧೀಶ ಎಂಎಸ್ ಸಂತೋಷ್ ಈ ಸಂದರ್ಭದಲ್ಲಿ ಮಾತನಾಡಿ, ನಮ್ಮ ನಮ್ಮ ಪರಿಸರವನ್ನು ನಾವು ಕಲುಷಿತಗೊಳ್ಳಲು ಬಿಡದೆ ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಪ್ರಕ್ರಿಯೆ ನಮ್ಮ ಮನೆಯಲ್ಲದೆ ನಮ್ಮ ಪರಿಸರದ ಶಾಲಾ – ಕಾಲೇಜ್, ಬಸ್ ನಿಲ್ದಾಣ, ಕಚೇರಿ, ಆಸ್ಪತ್ರೆ, ಮೈದಾನ ಮೊದಲಾದ ಕಡೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಆಸಕ್ತಿ ವಹಿಸಿದಾಗ ಮಾತ್ರ ಬದ್ಧತೆ ದೃಢಗೊಳ್ಳಲಿದೆ. ಇದು ಕೇವಲ ದಿನಾಚರಣೆಯಂದು ಮಾತ್ರವಲ್ಲದೆ ಈ ಪ್ರಕ್ರಿಯೆ ನಿಯಂತ್ರವಾಗಿರಬೇಕು. ಸ್ವಚ್ಛತಾ ಕಾರ್ಯಗಳಿಗೆ ಸಾಮೂಹಿಕ ಸ್ಪರ್ಶ ದೊರೆತಾಗ ಮಾತ್ರ ಬದ್ಧತೆ ಸದೃಢವಾಗಲಿದೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

7 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

7 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

9 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

10 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

17 hours ago