ಹೊಸನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಈ ಗ್ರಾಪಂ ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

0 814

ಹೊಸನಗರ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಾಗೂ 33 ಕೆವಿ ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ಪ್ರಯುಕ್ತ ಏಪ್ರಿಲ್ 5ರ ಶುಕ್ರವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00ರ ವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಈ ಪ್ರಯುಕ್ತ ಸಾಗರ – ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಪುರ, ಮೇಲಿನಬೆಸಿಗೆ, ಸೊನಲೆ ಮತ್ತು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ಪ್ರಸರಣದಲ್ಲಿ ಅಡಚಣೆ ಉಂಟಾಗಲಿದೆ.

ಈ ಸಂಬಂಧ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಹೊಸನಗರ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!