ಹೊಸನಗರ : ಪೊಲೀಸ್ ಠಾಣೆಯ (Police Station) ಮೆಟ್ಟಿಲೇರುವುದೆಂದರೆ ಸಾರ್ವಜನಿಕರಿಗೆ ಒಂಥರಾ ಮುಜುಗರ. ಆದರೆ ಇಂದು ಹೊಸನಗರ (Hosanagara) ಠಾಣೆಯಲ್ಲಿ ರಕ್ಷಣಾ ಇಲಾಖೆ ಸಿಬ್ಬಂದಿ ಕುಟುಂಬ ವರ್ಗ ಹಾಗೂ ಸಾರ್ವಜನಿಕರಿಗಾಗಿ ನೇತ್ರದಾನ (Eye Donation) ಹಾಗೂ ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸುವ ಮೂಲಕ ಪೊಲೀಸರು (Police) ಜನ ಸ್ನೇಹಿ ಎಂಬುದನ್ನು ಸಾಬೀತುಪಡಿಸಿದರು.
ಇಂದು ಠಾಣೆಯಲ್ಲಿ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಪಿಎಸ್ಐ ಶಿವಾನಂದ ವೈ.ಕೆ ನಮ್ಮ ಸಿಬ್ಬಂದಿಗಳ ಸಹಕಾರದಿಂದ ಉಡುಪಿಯ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ನ ಪ್ರಸಾದ್ ನೇತ್ರಾಲಯದ ನೇತೃ ತಜ್ಞರು ಹಾಗೂ ಸಿಬ್ಬಂದಿಗಳಿಂದ ನೇತೃ ತಪಾಸಣಾ ಶಿಬಿರ ಆಯೋಜಿಸಿದ್ದು ನೇತ್ರ ವೈದ್ಯ ಡಾ. ಅಹನಾ ನೇತ್ರತ್ವದಲ್ಲಿ ಯಶಸ್ವಿ ಶಿಬಿರ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟನೆ ನಂತರ ಟ್ರಸ್ಟ್ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರೀಶ್ ರವರು ಮಾತನಾಡಿ, ಕಣ್ಣುಗಳ ಬಗ್ಗೆ ನಿರ್ಲಕ್ಷ್ಯ ಸಲ್ಲ ಆಗಾಗ್ಗೆ ಕಣ್ಣುಗಳ ತಪಾಸಣೆ ಮಾಡಿಸುತ್ತಿರಬೇಕು ನಮ್ಮ ದೇಹದ ಪ್ರಮುಖಾಂಗ ಕಣ್ಣು ಕಣ್ಣಿನ ಸಮಸ್ಯೆ ಇದ್ದವರು ಸಂಘ ಸಂಸ್ಥೆಗಳವರು ಆರೋಗ್ಯ ಕೇಂದ್ರ ದವರು ಏರ್ಪಡಿಸುವ ಶಿಬಿರಗಳಲ್ಲಿ ಪಾಲ್ಗೊಂಡು ಸೌಲಭ್ಯ ಪಡೆಯಬೇಕೆಂದರು.
ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಹದ ಪ್ರಮುಖಾಂಗ ಕಣ್ಣು ಇಲ್ಲದಿದ್ದರೆ ಜೀವನವೇ ನಶ್ವರ ಎನಿಸುವುದು. ಮೊಬೈಲ್ ಬಳಕೆಯಿಂದ ಇತ್ತೀಚೆಗೆ ಕಣ್ಣಿನ ಸಮಸ್ಯೆ ಎಲ್ಲಾ ವಯೋಮಿತಿಯವರಲ್ಲು ಕಾಡುತ್ತಿದ್ದು ಕಾರಣ ಅನಿವಾರ್ಯವಾದರೂ ಮೊಬೈಲ್ ಬಳಕೆಯಿಂದ ದೂರವಿರಬೇಕೆಂದು ಎಲ್ಲರೂ ಮರಣನಂತರ ನೇತ್ರದಾನ ಮಾಡುವುದರಿಂದ ಇಬ್ಬರು ಅಂಧರ ಬಾಳಿಗೆ ಬೆಳಕಾಗಬಹುದಾಗಿದೆ. ಆದುದರಿಂದ ಕಣ್ಣಿನ ರಕ್ಷಣೆ ಬಗ್ಗೆ ಜಾಗೃತಿ ವಹಿಸಬೇಕೆಂದರು.
ಪಿಎಸ್ಐ ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಹೆಡ್ ಕಾನ್ಸ್ಟೇಬಲ್ ಹಾಲೇಶಪ್ಪ ಸ್ವಾಗತಿಸಿ, ವಂದಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…