ಹೊಸನಗರ: ಪಟ್ಟಣ ಪಂಚಾಯತಿ ಆವರಣದಲ್ಲಿ ದಸರಾ ಸಂಭ್ರಮವನ್ನು ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಪಟ್ಟಣ ಪಂಚಾಯತಿ ಆಡಳಿತಾಧಿಕಾರಿ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರ ನೇತೃತ್ವದಲ್ಲಿ ನಡೆದ ಈ ದಸರಾ ಹಬ್ಬ ಬಹಳ ಅದ್ದೂರಿಯಾಗಿ ನಡೆಸಿದ್ದು ಕಛೇರಿಯ ಒಳಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ನಂತರ ಪಟ್ಟಣ ಪಂಚಾಯತಿ ವಾಹನಗಳಿಗೆ, ನೀರಿನ ಟ್ಯಾಂಕ್ಗಳಿಗೆ, ಜಾಕ್ವೇಲ್ನಲ್ಲಿ ಪೂಜೆ ವಿಶೇಷವಾಗಿ ಕಸದ ರಾಶಿಗಳಿಗೆ ಪೂಜೆ ಸಲ್ಲಿಸಿ ಪಟ್ಟಣ ಪಂಚಾಯತಿಯ ಪ್ರತಿದಿನ ಜನರ ಸೇವೆ ಮಾಡುವ ವಾಹನಗಳನ್ನು ಶೃಂಗಾರ ಮಾಡಿ ಮೆರವಣಿಗೆ ಮಡೆಸಿದರು.
ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಪ್ರಶಾಂತ್ರವರು ಮಾತನಾಡಿ, ಹೊಸನಗರ ಪಟ್ಟಣ ಸ್ವಚ್ಛ ಪ್ರದೇಶವಾಗಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಜನರ ಸೇವೆ ಮಾಡುವುದು ಪಟ್ಟಣ ಪಂಚಾಯತಿಯ ಗುರಿಯಾಗಿದ್ದು ನಮ್ಮ ಪೌರ ಕಾರ್ಮಿಕರು ಹಗಲು ರಾತ್ರಿ ಎನ್ನದೇ ಸಾರ್ವಜನಿಕರ ಸೇವೆ ಮಾಡುತ್ತಿದ್ದು ಅವರಿಗೆ ದೇವರ ಆಶ್ರೀರ್ವಾದ ಅವರ ಮೇಲಿರಲೀ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮಾರುತಿ, ಪಟ್ಟಣ ಪಂಚಾಯತಿಯ ಸಿಬ್ಬಂದಿಯಾದ ಬಸವರಾಜ್, ಗಿರೀಶ್ ಹಾಗೂ ನೌಕರ ವರ್ಗ, ಪೌರ ನೌಕರರು, ಪಟ್ಟಣ ಪಂಚಾಯತಿ ಸದಸ್ಯರುಗಳಾದ ಹಾಲಗದ್ದೆ ಉಮೇಶ್, ಅಶ್ವಿನಿಕುಮಾರ್, ಸುರೇಂದ್ರ ಕೊಟ್ಯಾನ್, ಗುರುರಾಜ್ ಆರ್, ನಾಗಪ್ಪ, ಕೃಷ್ಣವೇಣಿ, ಗುಲಾಬಿ ಮರಿಯಪ್ಪ, ಗಾಯಿತ್ರಿ ನಾಗರಾಜ್, ಚಂದ್ರಕಲಾ ನಾಗರಾಜ್, ಚಂದ್ರಪ್ಪ ಯಶೋಧಮ್ಮ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…