ಹೊಸನಗರ ಮಾರಿಕಾಂಬಾ ದೇವಸ್ಥಾನದಲ್ಲಿ ಮಾ. 12ರಂದು ವರ್ಧಂತ್ಯೋತ್ಸವ, ಸಾರ್ವಜನಿಕ ಅನ್ನಸಂತರ್ಪಣೆ
ಹೊಸನಗರ: ಪಟ್ಟಣದ ಮಾರಿಗುಡ್ಡದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಮಾರ್ಚ್ 12ರ ಮಂಗಳವಾರ ಬೆಳಿಗ್ಗೆಯಿಂದ 18ನೇ ವರ್ಷದ ವರ್ಧಂತ್ಯೋತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಮಾರಿಕಾಂಬಾ ದೇವಸ್ಥಾನ ಕಮಿಟಿಯ ಅಧ್ಯಕ್ಷರಾದ ಲಕ್ಷ್ಮಿನಾರಾಯಣರಾವ್ ತಿಳಿಸಿದ್ದಾರೆ.
ದೇವಸ್ಥಾನದ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ.12ರ ಮಂಗಳವಾರ ಬೆಳಿಗ್ಗೆ ಮಾರಿಗುಡ್ಡದಲ್ಲಿರುವ ಶ್ರೀ ಮಾರಿಕಾಂಬಾ ದೇವಿ ಸನ್ನಿಧಿಯಲ್ಲಿ 18ನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಗಣೇಶ ಪೂಜೆ, ಪುಣ್ಯಾಹ ವಾಚನ, ಪ್ರಧಾನ ಸಂಕಲ್ಪ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪೂಜೆ, ಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ 12:30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಈ ದೇವಿಯ 18ನೇ ವರ್ಧಂತ್ಯೋತ್ಸವ ಹೊಸನಗರ ತಾಲ್ಲೂಕಿನ ಜನರು ಹಾಗೂ ಈ ದೇವಸ್ಥಾನದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ದೇವತಾ ಕಾರ್ಯಕ್ರಮಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಬೇಕೆಂದು ಈ ಮೂಲಕ ಕೇಳಿಕೊಂಡರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಟಿ.ಆರ್, ಖಜಾಂಚಿ ಪಿ. ಮನೋಹರ್, ಸಹಕಾರ್ಯದರ್ಶಿ ಹೆಚ್.ಎಸ್. ಗಿರೀಶ್, ದೇವಸ್ಥಾನದ ಕನ್ವೀನರ್ ನಾಗರಾಜ್ ಹೆಚ್ ಹಾಗೂ ಮಾರಿಕಾಂಬಾ ದೇವಸ್ಥಾನ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.