ಹೊಸನಗರ : ವಿಧಾನಸಭಾ ಕ್ಷೇತ್ರ ಪಡೆದೇ ತೀರಬೇಕು, ಇದು ನಮ್ಮೆಲ್ಲರ ಶಪಥವಾಗಬೇಕು ಎಂದು ತಾಲೂಕು ಗ್ರಾಮ ಪಂಚಾಯಿತಿಗಳ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಹೇಳಿದರು.
ಅವರು ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ಆವರಣದಲ್ಲಿ ‘ವಿಧಾನ ಸಭಾ ಕ್ಷೇತ್ರ ಹೋರಾಟ ನಡಿಗೆ ಗ್ರಾಮ ಪಂಚಾಯ್ತಿಗಳ ಕಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ಈ ಹೋರಾಟವನ್ನ ರೂಪಿಸಲಾಗಿದೆ. ಹೊಸನಗರ ತಾಲ್ಲೂಕು ವಿವಿಧ ವಿದ್ಯುತ್ ಮತ್ತು ಜಲ ಯೋಜನೆಗಳಿಂದ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಒಂದೆಡೆ ಇಡೀ ನಾಡಿಗೆ ಬೆಳಕು ಕೊಡುವ ಯೋಜನಯಾದರೆ, ಇನ್ನೊಂದೆಡೆ ಪಶ್ಚಿಮ ಘಟ್ಟ. ಹೀಗಾಗಿ ಇಲ್ಲಿ ಜನ ಸಂಖ್ಯೆ ಆಧಾರದಲ್ಲಿ ಕ್ಷೇತ್ರ ವಿಂಗಡಣೆ ಆಗದೆ, ವಿಸ್ತೀರ್ಣ ಮತ್ತು ಬೌಗೋಳಿಕ ಹಿನ್ನಲೆ ಆಧಾರದಲ್ಲಿ ಕ್ಷೇತ್ರ ನೀಡಬೇಕು ಎಂದು ಆಗ್ರಹಿಸಿದರು.
ಹರಿದು ಹಂಚಿರುವ ಕ್ಷೇತ್ರವನ್ನು ಮತ್ತೆ ಒಟ್ಟುಗೂಡಿಸುವ ನಿಟ್ಟಿನಲ್ಲಿ ಮಠಾಧೀಶರು, ರಾಜಕಾರಣಿಗಳು, ಕಲಾವಿದರು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತ, ಕಾರ್ಮಿಕರು ಒಂದಾಗಬೇಕಿದೆ ಎಂದು ಶ್ರೀನಿವಾಸ ರೆಡ್ಡಿ ಕರೆ ನೀಡಿದರು.
ಕ್ಷೇತ್ರಕ್ಕೆ ಒಳಪಡುವ ಪ್ರತಿ ಗ್ರಾಮ ಪಂಚಾಯಿತಿಗಳು ಒಕ್ಕೊರಲಿನಿಂದ ಈ ಹೋರಾಟವನ್ನು ಬೆಂಬಲಿಸುತ್ತಿದ್ದೇವೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯಿತಿಯು ವಿಶೇಷ ಸಾಮಾನ್ಯ ಸಭೆ ಮತ್ತು ಗ್ರಾಮಸಭೆಗಳ ಮೂಲಕ ನಿರ್ಣಯ ಕೈಗೊಂಡು ರಾಷ್ಟ್ರಪತಿ, ಚುನಾವಣಾ ಆಯೋಗ, ಪ್ರಧಾನ ಮಂತ್ರಿ, ರಾಜ್ಯಪಾಲರು ಹಾಗೂ ಮುಖ್ಯ ಮಂತ್ರಿಗಳಿಗೆ ಕಳುಹಿಸಿ ಕೊಡುವ ನಿರ್ಣಯವನ್ನು ತಾಲ್ಲೂಕು ಒಕ್ಕೂಟ ಕೈಗೊಂಡಿದೆ ಎಂದು ಒಕ್ಕೂಟದ ಸಂಚಾಲಕ ಹೆಚ್. ಬಿ. ಚಿದಂಬರ ಹೇಳಿದರು.
ಹಿರಿಯರು ಈಗಾಗಲೇ ಹೋರಾಟ ಆರಂಭಿಸಿದ್ದಾರೆ. ಅವರಿಗೆ ನಾವೂ ಸ್ಥಳೀಯ ಆಡಳಿತವಾಗಿ ಕೈ ಜೋಡಿಸುವ ಕೆಲಸ ಮಾಡುತ್ತೇವೆ. ರಥ ಯಾತ್ರೆಯ ನಂತರ ಹಂತ ಹಂತವಾಗಿ ಹೋರಾಟವನ್ನು ಕೊಂಡೊಯ್ಯಬೇಕಿದೆ. ಇದಕ್ಕೆ ಎಲ್ಲಾ ಜನಪ್ರತಿನಿದಿಗಳು ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಅಧ್ಯಕ್ಷೆ ಸುಜಾತ ದಿನೇಶ್, ಉಪಾಧ್ಯಕ್ಷರು ರಾಘವೇಂದ್ರ, ಸದಸ್ಯರಾದ ಸಂತೋಷ್ ಮಳವಳ್ಳಿ, ಜಯಪ್ರಕಾಶ್ ಶೆಟ್ಟಿ, ಗೋಪಾಲ್ ಹಿಲಗೋಡು, ಇಕ್ಬಾಲ್ ಅಹ್ಮದ್, ಕಲಾವಿದ ಗೋಪಾಲ ಮೂರ್ತಿ ಹೆಬೈಲು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇಂದು ಪುರಪ್ಪೆಮನೆ, ಹರಿದ್ರಾವತಿ, ಮಾರುತಿಪುರ, ಹರತಾಳು, ರಿಪ್ಪನ್ಪೇಟೆ, ಕೆಂಚನಾಲ, ಅರಸಾಳು, ಬೆಳ್ಳೂರು ಗ್ರಾಮ ಪಂಚಾಯಿತಿಗಳಿಗೆ ರಥ ಯಾತ್ರೆ ನಡೆಯಿತು. ಸಂಚಾಲಕ ಮಂಜುನಾಥ್ ಬ್ಯಾಣದ ಎಲ್ಲರನ್ನು ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು.
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…
ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…
ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ, ಕಾರ್ಯದರ್ಶಿ ಅನಿಲ್ಕುಮಾರ್, ಖಜಾಂಚಿ ದೀಪಕ್,…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…
ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…