ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಒತ್ತಾಯಿಸಿ ಜನಜಾಗೃತಿ ಅಭಿಯಾನ‌ ; ಮೂಲೆಗದ್ದೆ ಶ್ರೀಗಳು

ಹೊಸನಗರ : ಹೊಸನಗರ (Hosanagara) ತಾಲೂಕಿಗೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಮಾನ್ಯತೆಯನ್ನು ನೀಡುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಸಿದ್ದಗೊಂಡಿದೆ. ಇದರ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಅವರು ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕಳೆದ ವಾರ ಬಟ್ಟೆಮಲ್ಲಪ್ಪದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊಸನಗರ ಕ್ಷೇತ್ರ ಪುನರಚನೆ ಕುರಿತು ಜಾಗೃತಿ ಮೂಡಿಸುವ ಸ್ಥಬ್ದಚಿತ್ರ ಪ್ರದರ್ಶನ ನಡೆಯಿತು. ಸಮ್ಮೇಳನದಲ್ಲಿಯೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಇಡೀ ತಾಲೂಕಿನ ಜನರನ್ನು ಈ ದಿಸೆಯಲ್ಲಿ ಹೋರಾಟಕ್ಕೆ ಅಣಿಗೊಳಿಸಬೇಕಿದೆ. ಜಾಗೃತಿ ಮೂಡಿಸುವ ಸಲುವಾಗಿ ಸ್ಥಬ್ಧ ಚಿತ್ರ ಬುಧವಾರದಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳಿಂದ ಬೆಂಬಲ ಕೋರಲಾಗುವುದು ಎಂದರು.

ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿ ಹೊಸನಗರ ತಾಲೂಕು ಇಬ್ಬಾಗವಾಗಿ ಎರಡು ಕ್ಷೇತ್ರಗಳಿಗೆ ಹಂಚಿ ಹೋಗಿರುವುದು ತಾಲೂಕಿನ ಜನತೆಗೆ ಆದ ಅನ್ಯಾಯ ಹೊಸನಗರ ತಾಲೂಕು ಪಶ್ಚಿಮಘಟ್ಟ ಪ್ರದೇಶದಲ್ಲಿದ್ದು, ಐದು ಬಾರಿ ಮುಳುಗಡೆ ಹೊಂದಿದೆ. ಇಂದಿಗೂ ಮುಳುಗಡೆಯಿಂದ ಜನರ ಬದುಕಲ್ಲಿ ಉಂಟಾದ ತಲ್ಲಣಗಳು ಶಮನಗೊಂಡಿಲ್ಲ. ಅಭಿವೃದ್ಧಿ ಕರ‍್ಯಗಳಿಗೆ ಹಿನ್ನೆಡೆಯಾಗಿದೆ. ಮೂಲಸೌಕರ್ಯಗಳಿಲ್ಲದೇ ಗ್ರಾಮೀಣ ಜನತೆ ಸಂಕಷ್ಟದಲ್ಲಿದ್ದಾರೆ. ಇದರ ನಡುವೆ ತಾಲೂಕಿಗೆ ಇದ್ದ ವಿಧಾನಸಭಾ ಕ್ಷೇತ್ರದ ಮಾನ್ಯತೆ ರದ್ದಾಗಿರುವುದು ತುಂಬಲಾರದ ನಷ್ಟವಾಗಿದೆ. ಸಮಗ್ರ ಅಭಿವೃದ್ಧಿ ಹಾಗೂ ಜನಹಿತನ್ನು ಮನದಲ್ಲಿಟ್ಟುಕೊಂಡು ಹೊಸನಗರವನ್ನು ಮತ್ತೊಮ್ಮೆ ವಿಧಾನಸಭಾ ಕ್ಷೇತ್ರವನ್ನಾಗಿ ರೂಪುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಕ್ಷೇತ್ರ ಪುನರ್‌ರಚನೆ ಹೋರಾಟ ಸಮಿತಿಯ ಸಂಚಾಲಕ ಮಂಜುನಾಥ ಎಸ್ ಬ್ಯಾಣದ್, ವಿವಿಧ ಸಂಘ ಸಂಸ್ಥೆಯ ಪ್ರಮುಖರಾದ ಬಿ.ಎಸ್.ಸುರೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಸದಸ್ಯರಾದ ಶಂಕರಶೆಟ್ಟಿ, ಚಿದಂಬರ, ಕರುಣಾಕರ ಶೆಟ್ಟಿ, ಗುರೂಜಿ ಶಾಲೆಯ ಶಾಂತಮೂರ್ತಿ, ಹಿಲ್ಕುಂಜಿ ಕುಮಾರ್, ಪ್ರವೀಣ ಮತ್ತಿತರರು ಇದ್ದರು.

ಹೊಸನಗರ ತಾಲೂಕು‌ ಸಾಹಿತ್ಯ ಕನ್ನಡ ಸಮ್ಮೇಳನದ ಅಂಗವಾಗಿ ಹೊಸನಗರ ವಿಧಾನಸಭಾ ಕ್ಷೇತ್ರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನೂಲಿಗ್ಗೇರಿ ಗೆಳೆಯರ ಬಳಗ ನಿರ್ಮಿಸಿದ ಆಕರ್ಷಕ, ಅರ್ಥಪೂರ್ಣ ಸ್ತಬ್ಧಚಿತ್ರ ಗಮನ ಸೆಳೆದಿತ್ತು.
ಸ್ತಬ್ಧಚಿತ್ರದ ಪ್ರೇರಣೆ ಮತ್ತು ಮೂಲೆಗದ್ದೆ ಶ್ರೀಗಳ ಆಶಯ ಸಮ್ಮಿಳಿತಗೊಂಡು‌ ಹೋರಾಟ ಹೊಸರೂಪಕ್ಕೆ ಕಾಲಿಟ್ಟಿದೆ. ಹೊಸನಗರ ತಾಲೂಕಿನ 30 ಗ್ರಾಪಂ ವ್ಯಾಪ್ತಿಯಲ್ಲಿ ಸ್ತಬ್ಧಚಿತ್ರವನ್ನು ಬಳಸಿಕೊಂಡು‌ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಜಾಗೃತಿ ಮೂಡಿಸಲು‌ ತೀರ್ಮಾನಿಸಲಾಗಿದೆ.
ಈ‌ ಹಿಂದೆ ಶರಾವತಿ‌ ಹೋರಾಟದಲ್ಲೂ ಶ್ರೀಗಳ ಆಶಯ ನೂಲಿಗ್ಗೇರಿ ಗೆಳೆಯರ ಬಳಗದ ಸ್ತಬ್ಧಚಿತ್ರ ಬೆಸೆದಿತ್ತು, ಅಂದು ಸ್ತಬ್ಧ ಚಿತ್ರ ಜಿಲ್ಲಾ ಕೇಂದ್ರದವರೆಗೆ ಸಾಗಿದ ಬೃಹತ್ ಮೆರವಣಿಗೆಯ ಕೇಂದ್ರ ಬಿಂದು ಆಗ ಗಮನ ಸೆಳೆದಿತ್ತು.
ಇದೀಗ ಅದೇ ಮಾದರಿಯ ಹೋರಾಟ ಆರಂಭಗೊಂಡಿದ್ದು ಎರಡು ಕೈ ಜೋಡಿಸಿ‌ ಕ್ಷೇತ್ರವನ್ನು ಬೇಡುವ ಮಾದರಿಯಲ್ಲಿ ನಿರ್ಮಾಣ ಕಂಡ ಸ್ತಬ್ಧಚಿತ್ರ 30 ಗ್ರಾ.ಪಂ‌ ವ್ಯಾಪ್ತಿಯ 400 ಕಿ.ಮೀ ಸಂಚರಿಸಲಿದೆ. ನೂಲಿಗ್ಗೇರಿ ಗೆಳೆಯರ ಬಳಗದ ಕಾಳಜಿ ಪ್ರಶಂಸೆಗೆ ಪಾತ್ರವಾಗಿದೆ.

Malnad Times

Recent Posts

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

2 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

3 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

4 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

5 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

6 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಈವರೆಗಿನ ಶೇಕಡಾವಾರು ಮತದಾನದ ವಿವರ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…

7 hours ago