ಹೊಸನಗರ | ಶ್ರೀರಾಮನ ಭವ್ಯ ಮಂದಿರ ಲೋಕಾರ್ಪಣೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ

ಹೊಸನಗರ: ಇಲ್ಲಿನ ಗಂಗನಕೊಪ್ಪ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಗಂಗಾಧರೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ, ಶ್ರೀರಾಮತಾರಕ ಹೋಮ ಹಾಗೂ ರಾಮಭಜನೆ ಕಾರ್ಯಕ್ರಮ ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿಯವರು ಈ ಕಾರ್ಯಕ್ರಮದಲ್ಲಿ ಕರಸೇವಕರಿಗೆ ಗೌರವ ಸಮರ್ಪಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕಮವನ್ನು ಏರ್ಪಡಿಸಿದ್ದು ಸಾವಿರಾರು ಭಕ್ತರು ಆಗಮಿಸಿ ಅನ್ನಪ್ರಸಾದವನ್ನು ಸ್ವೀಕರಿಸಿದರು‌.

ಸಂಜೆ 5ಗಂಟೆಗೆ ಉತ್ತರ ದಿಕ್ಕಿನಲ್ಲಿ ದೀಪ ಬೆಳಗುವ ಹಾಗೂ ಯಕ್ಷಗಾನ ಬಯಲಾಟವನ್ನು ಏರ್ಪಡಿಸಲಾಗಿದೆ.

ಸೀತಾರಾಮಚಂದ್ರ ಸಭಾಭವನದಲ್ಲಿ ರಾಮತಾರಕ ಹೋಮ, ಅನ್ನಸಂತರ್ಪಣೆ

ಇಲ್ಲಿನ ಸೀತಾರಾಮಚಂದ್ರ ಸಬಾಭವನದ ಆವರಣದಲ್ಲಿ 8 ದಿನಗಳಿಂದ ಸಂಜೆ 6 ಗಂಟೆಯಿಂದ ಗಂಗನಕೊಪ್ಪ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಭಜನೆ ಕಾರ್ಯಕ್ರಮ ನಡೆದಿದ್ದು ಇಂದು ಬೆಳಿಗ್ಗೆಯಿಂದ ಶ್ರೀರಾಮ ದೇವರಿಗೆ ವಿಶೇಷ ರುದ್ರಾಭಿಷೇಕ, ಶ್ರೀರಾಮತಾರಕ ಹೋಮ ಹಾಗೂ ರಾಮಭಜನೆ ಕಾರ್ಯಕ್ರಮ ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ಹೊಸನಗರ ತಾಲ್ಲೂಕು ಕೋಟೆಗಾರ್ ವಿದ್ಯಾವರ್ಧಕ ಸಮಗದ ಅಧ್ಯಕ್ಷ ಶಶಿಧರ್‌ನಾಯ್ಕ್ ದಂಪತಿಗಳು ಪೂಜಾ ಕಾರ್ಯಕ್ರಮ ನೇರವೇರಿಸಿದ್ದು ಸಂಘದ ಎಲ್ಲ ಪದಾಧಿಕಾರಿಗಳು ಸಂಘದ ನಿರ್ದೇಶಕರು ಹಾಗೂ ಬಿಜೆಪಿ ಹಿರಿಯ ಮುಖಂಡರುಗಳಾದ ಎನ್.ಆರ್. ದೇವಾನಂದ್, ಎ.ವಿ. ಮಲ್ಲಿಕಾರ್ಜುನ್ ಚಿಕ್ಕನಕೊಪ್ಪ ಶ್ರೀಧರ್ ಇನ್ನೂ ಮುಂತಾದವರು ಪೂಜಾ ಕಾರ್ಯದಲ್ಲಿ ಉಪಸ್ಥಿತರಿದ್ದರು.

ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕಮವನ್ನು ಏರ್ಪಡಿಸಿದ್ದು ಸಾವಿರಾರು ಭಕ್ತರು ಆಗಮಿಸಿ ಅನ್ನಪ್ರಸಾದವನ್ನು ಸೇವಿಸಿದರು.

ಗಣಪತಿ, ಪಾರ್ವತಿ, ಮಹೇಶ್ವರ ದೇವಸ್ಥಾನದ ಆವರಣದಲ್ಲಿ ರಾಮತಾರಕ ಹೋಮ ಅನ್ನಸಂತರ್ಪಣೆ

ಗಣಪತಿ, ಪಾರ್ವತಿ, ಮಹೇಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನ ಸಮಿತಿ ಹಾಗೂ ವಿಘ್ನೇಶ್ವರ ಸೇವಾ ಸಮಿತಿಯವರ ಹಾಗೂ ಸಾರ್ವಜನಿಕರೊಂದಿಗೆ ಆಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಭಜನೆ ಕಾರ್ಯಕ್ರಮ ನಡೆದಿದ್ದು ಇಂದು ಬೆಳಿಗ್ಗೆಯಿಂದ ಗಣಪತಿ, ಪಾರ್ವತಿ, ಮಹೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ, ಶ್ರೀರಾಮತಾರಕ ಹೋಮ ಹಾಗೂ ರಾಮಭಜನೆ ಕಾರ್ಯಕ್ರಮ ಏರ್ಪಡಿಸಿದ್ದರು.

ದೇವಸ್ಥಾನದ ಸಮಿತಿಯ ಸದಸ್ಯರು ಹಾಗೂ ದೇವರು ಭಕ್ತಾರು ಭಕ್ತಾ ಮಹಿಳೆಯರು ಹೊಸನಗರ ಪ್ರಮುಖ ಬೀದಿಗಳಲ್ಲಿ ರಾಮಭಜನೆ ಮಾಡುತ್ತಾ ಮೆರವಣಿಗೆ ನಡೆಸಿ ದೇವಸ್ಥಾನದ ಆವರಣದಲ್ಲಿ ಪೂಜೆ ಕಾರ್ಯದಲ್ಲಿ ಪಾಲ್ಗೊಂಡರು.

ಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕಮವನ್ನು ಏರ್ಪಡಿಸಿ ಸಾವಿರಾರು ಭಕ್ತರು. ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

9 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

13 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

13 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

16 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

23 hours ago