Categories: HosanagaraShivamogga

ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಆಗಬೇಕಿದೆ ಎಮರ್ಜೆನ್ಸಿ ಆಪರೇಷನ್ !

ಹೊಸನಗರ : ರಾಜ್ಯದಲ್ಲಿ ಅತಿ ಹಿಂದುಳಿದ ತಾಲೂಕು ಮಳೆನಾಡಿನ ತವರುರಾದ ಹೊಸನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇದ್ದರೂ ಇಲ್ಲಿಗೆ ಮಂಜೂರಾದ ವೈದ್ಯ ಸಿಬ್ಬಂದಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರು ಸರ್ಕಾರಿ ಸೇವೆಯಿಂದ ವಂಚಿತರಾಗುತ್ತಿದ್ದಾರೆ.

ಶಸ್ತ್ರಚಿಕಿತ್ಸಕರು, ನೇತ್ರ ತಜ್ಞರು, ಕೀಲು ಮೂಳೆ ತಜ್ಞರು, ಧರ್ಮ ವೈದ್ಯರು, ಮಕ್ಕಳ ತಜ್ಞರು, ದಂತ ವೈದ್ಯರು, ತುರ್ತು ಅಪಘಾತ ಚಿಕಿತ್ಸೆ ವೈದ್ಯರುಗಳು ಮಾತ್ರ ಕರ್ತವ್ಯದಲ್ಲಿದ್ದು ಕಿವಿ, ಮೂಗು, ಗಂಟಲು ತಜ್ಞರು, ಅರವಳಿಕೆ ತಜ್ಞರು, ಫಿಜಿಷಿಯನ್, ಸ್ತ್ರೀರೋಗ ತಜ್ಞರು ಹಾಗೂ ತುರ್ತು ಅಪಘಾತ ಚಿಕಿತ್ಸೆ ವಿಭಾಗದ ಇಬ್ಬರು ವೈದ್ಯರುಗಳ ಹುದ್ದೆ ಖಾಲಿಯಾಗಿದ್ದು ಸಾರ್ವಜನಿಕರು ಸರ್ಕಾರಿ ವೈದ್ಯಕೀಯ ಸೇವೆಯಿಂದ ವಂಚಿತರಾಗಿದ್ದಾರೆ.

ಇಬ್ಬರು ಶುಶ್ರೂಷಣ ಅಧಿಕಾರಿಗಳು ಸೇರಿದಂತೆ ದ್ವಿತೀಯ ದರ್ಜೆ ಸಹಾಯಕರು ಕ್ಲರ್ಕ್ ಕಂ ಟೈಪಿಸ್ಟ್ ಗ್ರೇಡ್ 2 ನರ್ಸಿಂಗ್ ಅಧೀಕ್ಷಕರು ನೇತ್ರಾಧಿಕಾರಿಗಳು ಹಿರಿಯ ಹಾಗೂ ಕಿರಿಯ ಫಾರ್ಮಸಿಸ್ಟ್ ಕಿರಿಯ ಪ್ರಯೋಗ ಶಾಲಾ ಟೆಕ್ನಾಲಜಿಸ್ಟ್ ಸೇರಿದಂತೆ ಇತರೆ 33 ಗ್ರೂಪ್ ಡಿ ನೌಕರರ ಹುದ್ದೆ ಖಾಲಿ ಇರುತ್ತದೆ.

ಲಕ್ಷಾಂತರ ರೂ. ಬೆಲೆ ಬಾಳುವ ಅತ್ಯಾಧುನಿಕ ಯಂತ್ರಗಳು ಉಪಯೋಗಿಸುವ ತಂತ್ರಜ್ಞರಿಲ್ಲದೆ ತುಕ್ಕು ಹಿಡಿಯುವ ಸ್ಥಿತಿಯಲ್ಲಿದೆ. ಇಡೀ ಆಸ್ಪತ್ರೆ ಸಂಕೀರ್ಣಕ್ಕೆ ಲಭ್ಯವಾಗುವ ಸೋಲಾರ್ ವ್ಯವಸ್ಥೆ ಇದ್ದರು ಸಹ ಅದರ ನಿರ್ವಹಣೆ ಇಲ್ಲದೆ ಪ್ರತಿ ತಿಂಗಳ 50 ಸಾವಿರಕ್ಕೂ ಹೆಚ್ಚು ರೂ. ಗಳ ಬಿಲ್ಲನ್ನು ಮೆಸ್ಕಾಂಗೆ ಕಟ್ಟುವ ದುಸ್ಥಿತಿ ಆಸ್ಪತ್ರೆಗೆ ಬಂದಿದೆ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಸಹ ಕೆಲ ಸಮಯಗಳಿಂದ ಮುಚ್ಚಿದ್ದರಿಂದ ಕೃಷಿ ಕೂಲಿ ಕಾರ್ಮಿಕರೆ ಹೆಚ್ಚಿರುವ ಈ ಭಾಗದ ಜನರು ಹೆಚ್ಚಿನ ಹಣ ನೀಡಿ ಔಷಧಿಗಳನ್ನ ಖರೀದಿಸುವ ದುರ್ವಿಧಿ ಉಂಟಾಗಿದೆ.

ಪ್ರತಿ ದಿನ 400 ರಿಂದ 500 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಿದ್ದು ವೈದ್ಯರುಗಳ ಹಾಗೂ ಪ್ರಧಾನಮಂತ್ರಿಯ ಜನೌಷಧಿಗಳ ಕೊರತೆಯಿಂದ ಬಡ ಕೃಷಿ ಕೂಲಿ ಕಾರ್ಮಿಕರು ಸಾಗರ, ತೀರ್ಥಹಳ್ಳಿ, ಶಿವಮೊಗ್ಗ, ಮಣಿಪಾಲಗಳಿಗೆ ಆರೋಗ್ಯ ಸೇವೆಗಾಗಿ ಹೋಗಬೇಕಾಗಿದೆ.

ಕಳೆದ ತಿಂಗಳಲ್ಲಿ 20 ಸಾವಿರಕ್ಕೂ ಹೆಚ್ಚು ರೋಗಿಗಳು ಓಪಿಡಿಯಲ್ಲಿ ದಾಖಲಾಗಿದ್ದು ಆಸ್ಪತ್ರೆಗೆ ತುರ್ತಾಗಿ ಡಯಾಲಿಸಿಸ್ ಸೆಂಟರ್ ಹಾಗೂ ಸ್ಕ್ಯಾನಿಂಗ್ ಪರಿಕರದ ಅಗತ್ಯತೆ ಇದೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

3 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

5 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

18 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

20 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

21 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

21 hours ago