ಹೊಸನಗರ: ರಕ್ತದಾನ ಶಿಬಿರ ಮತ್ತು ರಕ್ತಗುಂಪುಗಳ ಪರಿಶೀಲನ ಶಿಬಿರವನ್ನು ಏರ್ಪಡಿಸಲಾಗಿದ್ದು ವಿವಿಧ ಸಂಘ-ಸಂಸ್ಥೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಸ್ಪಂದನ ಪ್ರಿಂಟರ್ಸ್ ಮಾಲೀಕ ಬಿ.ಎಸ್. ಸುರೇಶ್ 55ನೇ ವರ್ಷಕ್ಕೆ 55 ಬಾರಿ ರಕ್ತ ನೀಡಿ ಹೊಸನಗರಕ್ಕೆ ಹೊಸ ದಾಖಲೆ ಬರೆದಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಜೇಸಿಐ ಹೊಸನಗರ ಕೊಡಚಾದ್ರಿ, ವರ್ತಕರ ಸಂಘ, ಸಾರ್ವಜನಿಕ ಆಸ್ಪತ್ರೆ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೊಸನಗರ ಇವರು ಸಂಯುಕ್ತ ಆಶ್ರಯದಲ್ಲಿ 14 ವರ್ಷಗಳಿಂದ ಸ್ವರ್ಯಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತಗುಂಪುಗಳ ಪರಿಶೀಲನ ಶಿಬಿರವನ್ನು ಏರ್ಪಡಿಸಿಕೊಳ್ಳುತ್ತಾ ಬರುತ್ತಿದ್ದು ಈ ವರ್ಷವು ಕಾರ್ಯಕ್ರಮ ನಡೆಸಿದರು.
ಈ ಕಾರ್ಯಕ್ರಮದಲ್ಲಿ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಲಿಂಗರಾಜ್, ಡಾ.ಹೇಮಾಂತ್, ಡಾ ಗುರುಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಕಾರ್ಯದರ್ಶಿ ಮಲ್ಲಿಕಾರ್ಜುನ ಸ್ವಾಮಿ, ಖಜಾಂಚಿ ಪ್ರಭಾಕರ್, ರಾಧಕೃಷ್ಣ, ಬಿ.ಎಸ್ ಸುರೇಶ್, ಕೆ.ಆರ್ ಪ್ರದೀಪ್, ಕೇಶವ, ಶೈಲ, ಸುಶೀಲ, ಮಣಿ ಆರ್ಯನ್, ಹೊಸನಗರ ಆಸ್ಪತ್ರೆಯ ಗಜೇಂದ್ರ, ಜೇಸಿಐ ಅಧ್ಯಕ್ಷ ವಿನಯ್ ಕುಮಾರ್, ಪೂರ್ಣೇಶ್, ರಾಧಕೃಷ್ಣ, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಹರೀಶ್, ಯೋಗರಾಜ್, ಜ್ಯೋತಿ ಪೂರ್ಣೇಶ್ ಇನ್ನೂ ಮುಂತಾದವರು ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದರು.
ಸುಮಾರು 50 ಯೂನಿಟ್ ರಕ್ತವನ್ನು ಯುವಕರು ಸಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…