ಹೊಸನಗರ : ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿರುವ ಸುಮೇದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದವರು ರೈತರಿಂದ ಪಡೆದ ಅಡಿಕೆಯನ್ನು ಪ್ರವಾಸಿ ಮಂದಿರ ರಸ್ತೆಯ ಶ್ರೀ ವಿದ್ಯಾಸಂಘ ರಂಗಮಂದಿರದ ಕಟ್ಟಡದಲ್ಲಿ ಕಳೆದ ಎರಡು ವರ್ಷಗಳಿಂದ ರೈತರಿಂದ ಪಡೆದ ಅಡಿಕೆ ಚೀಲಗಳನ್ನು ದಾಸ್ತಾನು ಮಾಡಿದ್ದು ಅಲ್ಲಿಗೆ ಸುಬ್ರಮಣ್ಯ ಎಂಬ ಸೆಕ್ಯೂರಿಟಿ ಗಾರ್ಡನ್ ಸಹ ಸಹಕಾರಿ ಸಂಘದವರು ನೇಮಿಸಿದ್ದರು.
ಸೆಪ್ಟೆಂಬರ್ 23 ರಂದು ಗುರುವಾರ ಸಂಜೆ ದಾಸ್ತಾನು ಪರಿಶೀಲಿಸಿದಾಗ 798 ಕ್ವಿಂಟಲ್ 82 ಕೆಜಿ ಅಡಿಕೆಯನ್ನು ಒಟ್ಟು 1168 ಚೀಲ ಗಳಲ್ಲಿ ಸಂಗ್ರಹಿಸಿದ್ದು 22ರ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಬಂದು ನಂತರ ಎಪಿಎಂಸಿಯಲ್ಲಿ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದು ಸಂಜೆ ನಾಲ್ಕು ಗಂಟೆಗೆ ಟೆಂಡರ್ ಪ್ರಕ್ರಿಯೆ ಮುಗಿಸಿ ವಾಪಾಸ್ ಬಂದಿದ್ದು ಆಗ ಗೋದಾಮಿನಲ್ಲಿ 10 ಚೀಲಗಳಲ್ಲಿ ಇದ್ದ 2 ಕ್ವಿಂಟಲ್ 72 ಕೆಜಿ 500 ಗ್ರಾಂ ಅಡಿಕೆ ಕಳ್ಳತನವಾಗಿರುವ ಬಗ್ಗೆ ಮಾಹಿತಿ ಕಚೇರಿ ಸಿಬ್ಬಂದಿ ಪ್ರಕಾಶ್ ರವರಿಂದ ಲಭ್ಯವಾಗಿರುವುದಾಗಿ ಹಾಗೂ ಅದರ ಮೊತ್ತ 1.33 ಲಕ್ಷ ಮೌಲ್ಯಗಳೆಂದು ಅಂದಾಜಿಸಲಾಗಿದೆ.
ಈ ಬಗ್ಗೆ ಸಹಕಾರ ಸಂಘದ ಸಿಇಒ ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳಿಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸ್ಥಳೀಯರೆನ್ನಲಾದ ಮೂವರನ್ನು ತಮ್ಮ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…