ಹೊಸೂರು ಗುಡ್ಡೇಕೇರಿ ಪ್ರೌಢ ಶಾಲೆ ಮಡಿಲಿಗೆ ಮತ್ತೊಂದು ಗರಿ, ರಾಜ್ಯ ಮಟ್ಟದ ಅತ್ಯುತ್ತಮ ಶಾಲಾ ಶೈಕ್ಷಣಿಕ ಸಂಸ್ಥೆ 2023 ಪ್ರಶಸ್ತಿ

ತೀರ್ಥಹಳ್ಳಿ : ಕಳೆದ ಒಂದು ದಶಕದಿಂದಲೂ, ತೀರ್ಥಹಳ್ಳಿ ಗ್ರಾಮೀಣ ಭಾಗದ ಮೇರು ಸರ್ಕಾರಿ ಶಾಲೆಯಾಗಿ ರೂಪಗೊಂಡು, ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಸಮಗ್ರ ಪ್ರಗತಿಯಲ್ಲಿ ಕೀರ್ತಿ ಗಳಿಸಿದ ತೀರ್ಥಹಳ್ಳಿ ತಾಲ್ಲೂಕಿನ ಅತ್ಯಂತ ಹೆಮ್ಮೆಯ ಸರ್ಕಾರಿ ವಿದ್ಯಾಸಂಸ್ಥೆ ಹೊಸೂರು ಗುಡ್ಡೇಕೇರಿ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 100 ಅಂಕ, ಕ್ರೀಡೆಯಲ್ಲಿ, ಸಹ ಪಠ್ಯ ಚಟುವಟಿಕೆಗಳಲ್ಲಿ, ಜಿಲ್ಲೆ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಹೆಮ್ಮೆಯ ಶಾಲೆ. ಈಗಾಗಲೇ 2015 ರಲ್ಲಿ ರಾಜ್ಯ ಮಟ್ಟದ ಗೋವಿಂದೇಗೌಡ ಅತ್ಯುತ್ತಮ ಪ್ರೌಢಶಾಲಾ ಪ್ರಶಸ್ತಿಗೆ ನಾಮಿನೇಷನ್ ಆಗಿತ್ತು. 2017 ರಲ್ಲಿ ಶಿವಮೊಗ್ಗ ಡಯಟ್ ನಿಂದ, ಅತ್ಯುತ್ತಮ ಗುಣಮಟ್ಟದ ಪ್ರೌಢಶಾಲಾ ಪ್ರಶಸ್ತಿ ಹಾಗೂ 2018 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಅತ್ಯುತ್ತಮ ಪ್ರೌಢಶಾಲಾ ಪ್ರಶಸ್ತಿ ಪಡೆದಿರುವುದು ಹಾಗೂ ಇತ್ತೀಚಿಗೆ ಅನೇಕ ಶಾಲೆಗಳು ಹೊಸೂರು ಗುಡ್ಡೇಕೇರಿ ಪ್ರೌಢಶಾಲೆಗೆ ಭೇಟಿ ಅಲ್ಲಿನ ಸಮಗ್ರ ಪ್ರಗತಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿವೆ‌.

ನಿನ್ನೆ ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅತ್ಯುತ್ತಮ ಶಾಲಾ ಶೈಕ್ಷಣಿಕ ಸಂಸ್ಥೆ 2023 ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಪ್ರಶಸ್ತಿ ಬರಲು ಕಾರಣರಾದ ಎಲ್ಲಾ ಶಿಕ್ಷಕರಿಗೂ, ಹಿರಿಯ ವಿದ್ಯಾರ್ಥಿಗಳಿಗೂ, ಪೋಷಕರಿಗೂ, ಜನಪ್ರತಿನಿಧಿಗಳಿಗೂ, ದಾನಿಗಳಿಗೂ, ಕೇರ್ ವರ್ಕ್ಸ್ ಪೌಂಡೇಷನ್ ಬೆಂಗಳೂರು, ಸಂಘ ಸಂಸ್ಥೆಗಳಿಗೂ, ಕಳೆದ ದಶಕದಿಂದ ಸೇವೆ ಸಲ್ಲಿಸಿದ ಎಲ್ಲಾ ಎಸ್‌ಡಿಎಂಸಿ ಸದಸ್ಯರಿಗೂ, ಅಧ್ಯಕ್ಷರಿಗೂ, ಗ್ರಾಮಸ್ಥರಿಗೂ, ಶಿಕ್ಷಣ ಇಲಾಖೆಗೂ, ಎಲ್ಲಾ ಪ್ರಾಥಮಿಕ ಶಾಲೆಗಳಿಗೂ, ಶಾಲೆಯ ಬೆಳವಣಿಗೆಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಶಾಲೆಯ ಬೆಳವಣಿಗೆ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಹಾಗೂ 1965 ರಲ್ಲಿ ಶಾಲೆ ಕಟ್ಟಲು ಅತ್ಯಂತ ಶ್ರಮ ವಹಿಸಿದ ಕಾಡಮ್ಮ ಹೆಗ್ಗಡತಿ ಗುಡ್ಡೇಕೇರಿ ಹಾಗೂ ತಮ್ಮ ತಮ್ಮ ಮನೆಯಲ್ಲಿ ಮಕ್ಕಳಿಗೆ ಊಟ ಹಾಕಿ, ಶಾಲೆ ಉಳಿಸಿಕೊಂಡು ಬಂದ ಅಂದಿನ ಎಲ್ಲಾ ಶಿಕ್ಷಣ ಪ್ರೇಮಿಗಳಿಗೆ, ಶಾಲೆಯಲ್ಲಿ ಓದಿದ ಎಲ್ಲಾ ಮಕ್ಕಳಿಗೂ, ಕರ್ತವ್ಯ ನಿರ್ವಹಿಸಿದ ಎಲ್ಲಾ ಮುಖ್ಯ ಶಿಕ್ಷಕರಿಗೂ, ಶಿಕ್ಷಕರಿಗೂ, ಸಿಬ್ಬಂದಿ ವರ್ಗದವರಿಗೆ ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ ಈ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

6 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

12 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

20 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago