ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕ ಸಾವು !

0 481

ಶಿಕಾರಿಪುರ : ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕ ದಾವಣಗೆರೆ ಜಿಲ್ಲೆ ನ್ಯಾಮತಿ
ತಾಲ್ಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಎಂದು ತಿಳಿದು ಬಂದಿದೆ. ಈತ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲಸಿ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದ ಪರಿಣಾಮ ತೀವ್ರ ಗಾಯಗೊಂಡಿದ್ದನು. ತೀವ್ರ ಗಾಯಗೊಂಡಿದ್ದ ಯುವಕನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕೊಂಡೊಯ್ಯುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಯುವಕನ ಸಾವಿಗೆ ಸಂಬಂಧಿಸಿದಂತೆ ಯುವಕನ ತಂದೆ ಗಜೇಂದ್ರ ಆಚಾರ್ ಹೋರಿ ಹಬ್ಬ ಆಯೋಜಕರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಠಾಣೆಯಲ್ಲಿ ದೂರು ನೀಡಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!