ಶಿವಮೊಗ್ಗ : ಜಿಲ್ಲೆಯ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಾನೆ ನಡೆದಿರುವ ಗ್ರಾಮ ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲು ಎಲ್ಲಾ ಏಳು ತಾಲೂಕುಗಳ ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ನಿಗಧಿಪಡಿಸಿ ಜಿಲ್ಲಾಧಿಕಾರಿಗಳು ದಿನಾಂಕಗಳನ್ನು ಪ್ರಕಟಿಸಿರುತ್ತಾರೆ.
ಜೂ.19 ರಂದು ಬೆ. 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ತಾಲೂಕು ಸಭೆ, 20 ರಂದು ಬೆ.10.30ಕ್ಕೆ ತೀರ್ಥಹಳ್ಳಿ ಗೋಪಾಲಗೌಡ ರಂಗಮಂದಿರದಲ್ಲಿ ತೀರ್ಥಹಳ್ಳಿ ತಾಲೂಕು ಸಭೆ ಮತ್ತು ಮಧ್ಯಾಹ್ನ 3.00ಕ್ಕೆ ಹೊಸನಗರ ಐ.ಬಿ.ರಸ್ತೆಯಲ್ಲಿರುವ ವಿದ್ಯಾಸಂಘ ರಂಗಮಂದಿರದಲ್ಲಿ ಹೊಸನಗರ ತಾಲೂಕು ಸಭೆ, ಜೂ. 21 ರಂದು ಬೆ. 10.30ಕ್ಕೆ ಭದ್ರಾವತಿ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಭದ್ರಾವತಿ ತಾಲೂಕು ಸಭೆ, 22 ರಂದು ಬೆ. 10.30ಕ್ಕೆ ಶಿಕಾರಿಪುರ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕು ಸಭೆ, 23 ರಂದು ಬೆ. 10.30ಕ್ಕೆ ಸೊರಬ ಶ್ರೀರಂಗ ಕನ್ವೆಂಷನ್ ಹಾಲ್ನಲ್ಲಿ ಸೊರಬ ತಾಲೂಕು ಸಭೆ ಹಾಗು ಅಂದು ಮಧ್ಯಾಹ್ನ 3.00ಕ್ಕೆ ಸಾಗರ ಎಲ್.ಬಿ.ಕಾಲೇಜು ಸಭಾಂಗಣದಲ್ಲಿ ಸಾಗರ ತಾಲೂಕು ಸಭೆಯನ್ನು ಏರ್ಪಡಿಸಲಾಗಿದ್ದು, ನಿಗದಿತ ದಿನಾಂಕಗಳಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ನಿಗದಿಪಿಡಿಸುವ ಪ್ರಕ್ರಿಯೆಗೆ ಹಾಜರಿರುವಂತೆ ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾ.ಪಂ.ಗಳ ಚುನಾಯಿತರಾದ ಹಾಗೂ ಅವಧಿ ಮುಕ್ತಾಯಗೊಳ್ಳದೇ ಇರುವ ಗ್ರಾ.ಪಂ.ಗಳ ಚುನಾಯಿತ ಸದಸ್ಯರುಗಳು ಹಾಜರಿರುವಂತೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…