Categories: Shivamogga

2ನೇ ಅವಧಿಗೆ ಗ್ರಾ.ಪಂ.ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಸಭೆ


ಶಿವಮೊಗ್ಗ : ಜಿಲ್ಲೆಯ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಾನೆ ನಡೆದಿರುವ ಗ್ರಾಮ ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲು ಎಲ್ಲಾ ಏಳು ತಾಲೂಕುಗಳ ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ನಿಗಧಿಪಡಿಸಿ ಜಿಲ್ಲಾಧಿಕಾರಿಗಳು ದಿನಾಂಕಗಳನ್ನು ಪ್ರಕಟಿಸಿರುತ್ತಾರೆ.

ಜೂ.19 ರಂದು ಬೆ. 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ತಾಲೂಕು ಸಭೆ, 20 ರಂದು ಬೆ.10.30ಕ್ಕೆ ತೀರ್ಥಹಳ್ಳಿ ಗೋಪಾಲಗೌಡ ರಂಗಮಂದಿರದಲ್ಲಿ ತೀರ್ಥಹಳ್ಳಿ ತಾಲೂಕು ಸಭೆ ಮತ್ತು ಮಧ್ಯಾಹ್ನ 3.00ಕ್ಕೆ ಹೊಸನಗರ ಐ.ಬಿ.ರಸ್ತೆಯಲ್ಲಿರುವ ವಿದ್ಯಾಸಂಘ ರಂಗಮಂದಿರದಲ್ಲಿ ಹೊಸನಗರ ತಾಲೂಕು ಸಭೆ, ಜೂ. 21 ರಂದು ಬೆ. 10.30ಕ್ಕೆ ಭದ್ರಾವತಿ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಭದ್ರಾವತಿ ತಾಲೂಕು ಸಭೆ, 22 ರಂದು ಬೆ. 10.30ಕ್ಕೆ ಶಿಕಾರಿಪುರ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕು ಸಭೆ, 23 ರಂದು ಬೆ. 10.30ಕ್ಕೆ ಸೊರಬ ಶ್ರೀರಂಗ ಕನ್ವೆಂಷನ್ ಹಾಲ್‍ನಲ್ಲಿ ಸೊರಬ ತಾಲೂಕು ಸಭೆ ಹಾಗು ಅಂದು ಮಧ್ಯಾಹ್ನ 3.00ಕ್ಕೆ ಸಾಗರ ಎಲ್.ಬಿ.ಕಾಲೇಜು ಸಭಾಂಗಣದಲ್ಲಿ ಸಾಗರ ತಾಲೂಕು ಸಭೆಯನ್ನು ಏರ್ಪಡಿಸಲಾಗಿದ್ದು, ನಿಗದಿತ ದಿನಾಂಕಗಳಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ನಿಗದಿಪಿಡಿಸುವ ಪ್ರಕ್ರಿಯೆಗೆ ಹಾಜರಿರುವಂತೆ ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾ.ಪಂ.ಗಳ ಚುನಾಯಿತರಾದ ಹಾಗೂ ಅವಧಿ ಮುಕ್ತಾಯಗೊಳ್ಳದೇ ಇರುವ ಗ್ರಾ.ಪಂ.ಗಳ ಚುನಾಯಿತ ಸದಸ್ಯರುಗಳು ಹಾಜರಿರುವಂತೆ ತಿಳಿಸಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago