Categories: Shivamogga

4 ಕಾರುಗಳೊಂದಿಗೆ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮನ

ಶಿವಮೊಗ್ಗ: ಜಿಲ್ಲೆಯ ನೂತನ ವಿಮಾನ‌ ನಿಲ್ದಾಣಕ್ಕೆ ಮತ್ತೊಂದು ವಿಮಾನ ಬಂದಿಳಿದೆ.

ಈ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಾಯು ಪಡೆ ವಿಮಾನದಲ್ಲಿ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (ಎಸ್ಪಿಜಿ) ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿದ್ದು, ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದ್ದಾರೆ.

ವಾಯುಸೇನೆಯ ಇಲ್ಯೂಷಿನ್ 76 ವಿಮಾನದಿಂದ ನಾಲ್ಕು ಕಾರುಗಳನ್ನು ಕೆಳಗಿಳಿಸಿ ಎಸ್ಪಿಜಿ ತಂಡದ ಪರಿಶೀಲನೆ ಮಾಡಲಾಯಿತು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ SPG ತಂಡ ಜಿಲ್ಲಾಧಿಕಾರಿ ಸೇರಿ ಪ್ರಮುಖ ಅಧಿಕಾರಿಗಳ ಭೇಟಿ ಮಾಡಿದೆ. ಬಳಿಕ ವಿಮಾನ ನಿಲ್ದಾಣದ ಟರ್ಮಿನಲ್ ಪರಿಶೀಲಿಸಿ, ಅಲ್ಲಿಂದ ನೇರವಾಗಿ ತಮ್ಮ ವಾಹನಗಳ ಮೂಲಕವೇ ಶಿವಮೊಗ್ಗ ನಗರಕ್ಕೆ SPG ತಂಡ ತೆರಳಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಶಿವಮೊಗ್ಗಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿಯಲಿದ್ದಾರೆ. ಈ ಮೂಲಕ ಪ್ರಧಾನಿಗಳ ವಿಶೇಷ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊಟ್ಟ ಮೊದಲ ವಿಮಾನವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.

ಇತ್ತೀಚೆಗೆ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿ, ಪ್ರಧಾನಿಗಳ ವಿಮಾನವೇ ಮೊದಲ ವಿಮಾನ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಇದು ನಮಗೆ ಬಹಳ ಸಂಸತಸ ತಂದಿದೆ. ಇದೇ ವೇಳೆ ಪ್ರಧಾನಿ ಮೋದಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

ಅವರ ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 12:30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಭೆಗೆ 2ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಅಂದಿನ ಕಾರ್ಯಮದ ತಯಾರಿ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು. ವಿಮಾನ ನಿಲ್ದಾಣ ಉದ್ಘಾಟನೆಯಾದ 15 ಅಥವಾ 1 ತಿಂಗಳ ನಂತರ ತನ್ನ ಕಾರ್ಯಾರಂಭ ಮಾಡಲಿದೆ. ಮತ್ತು ಆದ್ಯತೆ ಪ್ರಕಾರ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳ ಪಟ್ಟಿ ಸಿದ್ದವಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವೆಚ್ಚ

ಒಟ್ಟು ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನು ಉಳಿದ ಹಣದಲ್ಲಿ ಭೂ ಖರೀದಿಗೆ ನೀಡಲಾಗಿದೆ. ಭೂಮಿಯನ್ನು ಕಳೆದುಕೊಂಡವರಿಗೆ ಕರ್ನಾಟಕ ಗೃಹ ಮಂಡಳಿ ನಿವೇಶನ ನೀಡಲಿದೆ. ಈಗಾಗಲೇ 320 ಕುಟುಂಬಗಳಿಗೆ ನೀಡಲು ನಿವೇಶನಗಳು ಸಿದ್ದವಾಗಿವೆ ಎಂದರು.

ಹಾಗೇ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಧಾನಿ ಮೋದಿ ಅವರು ಹೈವೆ, ಸ್ಮಾರ್ಟ್ ಸಿಟಿ, ರೇಲ್ವೆ ಕಾಮಗಾರಿಗಳನ್ನು ಮತ್ತು ಹಲವು ಗ್ರಾಮಗಳಿಗೆ ನೀರಿನ ಸೌಲಭ್ಯ, ಜನ್ ಜೀವನ್ ಮಿಷನ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

2 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

17 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

18 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

23 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

1 day ago