ಶಿವಮೊಗ್ಗ : ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗಾಗಿ ಜಾರಿಗೆ ತರಲಾಗಿರುವ ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯಡಿ 9 ಮತ್ತು 10 ನೇ ತರಗತಿ ಮಕ್ಕಳಿಗೂ ಬೇಯಿಸಿದ ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಇಂದಿನಿಂದ ವಿತರಿಸಲಾಗುತ್ತಿದೆ ಎಂದು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.
ಇಂದು ಪಿಳ್ಳಂಗಿರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ/ಬಾಳೆಹಣ್ಣು/ಶೇಂಗಾ ಚಿಕ್ಕಿಯನ್ನು ವಿತರಣೆ ಮಾಡಿ ಮಾತನಾಡಿದರು.
ಈ ಹಿಂದೆ 1 ರಿಂದ 8 ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವನ್ನು ವಾರದಲ್ಲಿ ಒಂದು ದಿನ ಮೊಟ್ಟೆ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಾರ್ಷಿಕ ಒಟ್ಟು 46 ದಿನಗಳ ಕಾಲ ವಿತರಸಲಾಗಿತ್ತು.
9 ಮತ್ತು 10 ನೇ ತರಗತಿ ಮಕ್ಕಳಿಗೂ ಕೂಡ ಪೌಷ್ಟಿಕಾಂಶವುಳ್ಳ ಪೂರಕ ಆಹಾರವನ್ನು ನೀಡಬೇಕಂದು ನಿರ್ಧರಿಸಿ ಸರ್ಕಾರ ಪ್ರಸಕ್ತ ಸಾಲಿನ ಇಂದಿನಿಂದ ಈ ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಿಸಿದೆ. ಮಕ್ಕಳಿಗೆ ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ವೃದ್ದಿಸುವಲ್ಲಿ ಇದು ಸಹಕಾರಿಯಾಗಿದೆ. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಇದು ಸಹಕರಿಸುತ್ತದೆ. ವಿದ್ಯಾರ್ಥಿಗಳ ಇದರ ಸದುಪಯೋಗ ಪಡೆದು ಉತ್ತಮ ವಿದ್ಯಾಭ್ಯಾಸ ಪಡೆದು ಉತ್ತಮ ನಾಗರೀಕರಾಗಬೇಕೆಂದು ಹಾರೈಸಿದರು.
ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲೆಯಲ್ಲಿ ಒಟ್ಟು 159507 ವಿದ್ಯಾರ್ಥಿಗಳಿದ್ದು ವಾರ್ಷಿಕವಾಗಿ ರೂ.7.65 ಕೋಟಿ ಅನುನಾದ ಈ ಯೋಜನೆಯಡಿ ನಿಗದಿಯಾಗಿದೆ. ಇಂದು ಪಿಳ್ಳಂಗಿರಿ ಪ್ರೌಢಶಾಲೆಯಲ್ಲಿ ಹಾಜರಿದ್ದ 254 ಮಕ್ಕಳ ಪೈಕಿ 224 ಮಕ್ಕಳು ಮೊಟ್ಟೆ, 29 ಮಕ್ಕಳು ಶೇಂಗಾ ಚಿಕ್ಕಿ ಮತ್ತು 01 ಮಗು ಬಾಳೆ ಹಣ್ಣನ್ನು ಸೇವಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಇಓ ನಾಗರಾಜ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ದಾದಾಪೀರ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯಿನಿ ವಿಶಾಲಾಕ್ಷಿ, ಸಹ ಶಿಕ್ಷಕರು, ಶಿಕ್ಷಣ ಸಂಯೋಜನಾಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…