ಶಿವಮೊಗ್ಗ : ಜಿಲ್ಲೆಯ ಚೋರಡಿ ಬಳಿ ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇದುವರೆಗೂ ಐವರು ಸಾವನ್ನಪ್ಪಿರುವ ಸಾಧ್ಯತೆ ಇದ್ದು ಸಾವಿನ ಸಂಖ್ಯೆ ಇನ್ನಷ್ಟು ಜಾಸ್ತಿ ಆಗುವ ಸಂಭವವಿದೆ.
ಘಟನೆಯಲ್ಲಿ ಹಲವರು ಇನ್ನೂ ಬಸ್ಸಿನಲ್ಲಿಯೇ ಸಿಲುಕಿದ್ದು ಅವರನ್ನ ರಕ್ಷಿಸುವ ಕಾರ್ಯಚರಣೆ ಮುಂದುವರೆದಿದೆ ಸ್ಥಳಕ್ಕೆ ಅಂಬುಲೆನ್ಸ್ ಗಳು ದೌಡಾಯಿಸಿವೆ. ಗಾಯಾಳುಗಳನ್ನ ಶಿವಮೊಗ್ಗದ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೀಡು ಬಿಟ್ಟಿದ್ದು ರಕ್ಷಣಾ ಕಾರ್ಯಕರ್ತರಲ್ಲಿ ತೊಡಗಿದ್ದಾರೆ. ಬಸ್ಗಳನ್ನು ಬೇರ್ಪಡಿಸಲು ಜೆಸಿಬಿಯನ್ನ ಬಳಸಿಕೊಳ್ಳಲಾಗುತ್ತಿದೆ.
ಕುಂಸಿ ಠಾಣೆಯ ಪೊಲೀಸರು ಸ್ಥಳದಲ್ಲಿದ್ದು ಸ್ಥಳೀಯರ ಸಹಾಯದೊಂದಿಗೆ ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸುತ್ತಿದ್ದಾರೆ ಘಟನೆಯಿಂದಾಗಿ ಸಾಗರ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಎರಡು ಬಸ್ಗಳು ಶಿಕಾರಿಪುರ ಶಿವಮೊಗ್ಗದ ನಡುವೆ ಸಂಚರಿಸುವ ಬಸ್ಗಳಾಗಿದ್ದು ಒಂದು ಬಸ್ನ ಚಾಲಕ ಕೂಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕುಮದ್ವತಿ ಸೇತುವೆ ಬಳಿಯಲ್ಲಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…