BID | Shivamogga | ಸಾರ್ವಜನಿಕ ಹರಾಜು ಪ್ರಕಟಣೆ | ಶ್ರೀ ಕ್ಷೇತ್ರ ಜೇನುಕಲ್ಲಮ್ಮ ದೇವಿ ಜಾತ್ರೆ ಅಂಗವಾಗಿ ಸೆ.25 ರಂದು ಬಹಿರಂಗ ಹರಾಜು

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಜೇನುಕಲ್ಲಮ್ಮ ದೇವಿಯ ಜಾತ್ರೋತ್ಸವದ ಅಂಗವಾಗಿ ಸೆ.25 ರಂದು ಸೋಮವಾರ ಬೆಳಿಗ್ಗೆ 11-00 ಗಂಟೆಗೆ ಸರಿಯಾಗಿ ಅಂಗಡಿ, ಹೋಟೆಲ್ ಇತರೆ ಅಂಗಡಿಗಳ ಕರ ವಸೂಲಾತಿ ಬಗ್ಗೆ ಬಹಿರಂಗ ಹರಾಜನ್ನು ಕೋಡೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದೆ.

ಸಾರ್ವಜನಿಕರು ಈ ಹರಾಜಿನಲ್ಲಿ ಭಾಗವಹಿಸಲು ಈ ಮೂಲಕ ಕೋಡೂರು ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಪಿಡಿಒ, ಸಿಬ್ಬಂದಿ ವರ್ಗದವರು ಕೋರಿದ್ದಾರೆ.

ನಿಬಂಧನೆಗಳು

  • ಈ ಹರಾಜಿನಲ್ಲಿ ಭಾಗವಹಿಸುವವರು ಗ್ರಾಮ ಪಂಚಾಯಿತಿಗೆ ತೆರಿಗೆ ಹಣವನ್ನು ಪಾವತಿಸಿ, ಡಿಪಾಸಿಟ್ ಹಣ ರೂ. 5000/-ಕಟ್ಟಿ ಹರಾಜು ಕರೆಯತಕ್ಕದ್ದು.
  • ಹರಾಜು ಮುಗಿದ ಕೂಡಲೇ ಬಿಡ್‌ದಾರರು ಪೂರ್ತಿ ಹಣವನ್ನು ಏಕಗಂಟಿನಲ್ಲಿ ಪಾವತಿಸತಕ್ಕದ್ದು. ವಿಳಂಬಕ್ಕೆ ಅವಕಾಶವಿಲ್ಲ. ಮೊದಲನೇ ಬಿಡ್‌ದಾರರು ಹಣ ಪಾವತಿಸಲು ವಿಫಲವಾದರೆ ಅವರ ಬಿಡ್ ರದ್ದು ಮಾಡಿ 2ನೇ ಬಿಡ್‌ದಾರರಿಗೆ ಅವಕಾಶ ನೀಡಲಾಗುವುದು.
  • ಜಾತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು.
  • ಸಾರ್ವಜನಿಕರ ಆರೋಗ್ಯದ ಬಗ್ಗೆ ಕ್ರಮ ವಹಿಸುವುದು.
  • ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವುದು.
  • ವ್ಯಾಪಾರಸ್ಥರಿಗೆ ಅನಾನುಕೂಲವಾಗದಂತೆ ತೆರಿಗೆ ವಸೂಲಿ ಮಾಡತಕ್ಕದ್ದು.
  • ಈ ಬಗ್ಗೆ ತೆರಿಗೆ ವಸೂಲಾತಿ ಮಾಡಲು ಗ್ರಾ.ಪಂ.ನಿಂದ ಅನುಮತಿ ಪತ್ರ ಪಡೆದು ತೆರಿಗೆ ವಸೂಲಿ ಮಾಡತಕ್ಕದ್ದು.
  • ಅನುಮತಿ ಪತ್ರ ಪಡೆಯುವ ಪೂರ್ವದಲ್ಲಿ ಹರಾಜು ಪಡೆದಿರುವ ಮೊತ್ತವನ್ನು ಪತ್ರ ಪಡೆಯುವುದು. ಸಂಪೂರ್ಣ ಪಾವತಿಸಿ ಅನುಮತಿ
  • ಈ ಬಗ್ಗೆ ಯಾವುದೇ ಷರತ್ತು ಉಲ್ಲಂಘಿಸಿದಲ್ಲಿ ಬಿಡ್‌ದಾರರನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡುವುದು.
  • ಹರಾಜು ಒಪ್ಪಂದವನ್ನು ತಿರಸ್ಕರಿಸುವ ಹಕ್ಕನ್ನು ಗ್ರಾಮ ಪಂಚಾಯಿತಿಗೆ ಕಾಯ್ದಿರಿಸಿದೆ.
  • ಜಾತ್ರೆಯಲ್ಲಿ ಸಂಪೂರ್ಣ ಸ್ವಚ್ಛತೆ ನಿರ್ವಹಣೆ ಮಾಡಬೇಕು.
  • ಹರಾಜು ಮಂಜೂರಾದ ಕೂಡಲೇ 100/- ರೂ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರವನ್ನು ಬರೆದು ಕೊಡತಕ್ಕದ್ದು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

24 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago