ಹೊಸನಗರ: ಅಪರಾಧ ನಡೆಯುವುದಕ್ಕಿಂತ ವಂಚಿತವಾಗಿ ಎಚ್ಚೆತ್ತುಕೊಂಡರೆ ನಮ್ಮ ಜೀವದ ಜೊತೆಗೆ ಇನ್ನೊಬ್ಬರಿಗೂ ನೋವು ಆಗದಂತೆ ನೋಡಿಕೊಳ್ಳಬಹುದು ಎಂದು ಹೊಸನಗರದ ಸಬ್ ಇನ್ಸ್ಪೆಕ್ಟರ್ ಶಿವಾನಂದ್ ಕೋಳಿ ಹೇಳಿದರು.
ಹೊಸನಗರ ಟೌನ್ನಲ್ಲಿ (Hosanagara) ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾಹನವನ್ನು ಚಲಾಯಿಸುತ್ತಿರುವಾಗ ಎಚ್ಚರದಿಂದಿರಬೇಕು. 18ವರ್ಷದ ಒಳಗಿನವರಿಗೆ ವಾಹನ ಚಲಾಯಿಸಲು ನೀಡುವುದು ಅಪರಾಧ. ನಾವು ಕೇಸ್ ಹಾಕುತ್ತೇವೆ ಎಂದು ಹೆಲ್ಮೆಟ್ ಹಾಕುವುದಕ್ಕಿಂತ ನಿಮ್ಮ ಜೀವವನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಹೆಲ್ಮೆಟ್ ಧರಿಸಿ. ಪ್ರತಿಯೊಬ್ಬರು ದ್ವಿಚಕ್ರ ವಾಹನ ಓಡಿಸುವವರು ಹಾಗೂ ಮೂರು ಚಕ್ರದ ವಾಹನ, ನಾಲ್ಕು ಚಕ್ರದ ವಾಹನ ಓಡಿಸುವವರು ಕಡ್ಡಾಯವಾಗಿ ವಾಹನದ ಪರವಾನಿಗೆ, ಡ್ರೈವಿಂಗ್ ಲೈಸನ್ಸ್, ಹೊಗೆ ತಪಾಸಣೆ ಪತ್ರ, ಇನ್ಶುರೆನ್ಸ್ ಪ್ರತಿಯನ್ನು ಕಡ್ಡಾಯವಾಗಿ ಜೊತೆಯಲ್ಲಿ ಇಟ್ಟುಕೊಂಡಿರಬೇಕು. ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೇ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ತೀರ್ಥೇಶ್, ಗೋಪಾಲಕೃಷ್ಣ, ಅವಿನಾಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…