Hosanagara | ಅರಣ್ಯ ಇಲಾಖೆಯಿಂದ ಮಲೆನಾಡಿನ ಜನರಿಗೆ ದಬ್ಬಾಳಿಕೆ ; ಕೆಡಿಪಿ ಸಭೆಯಲ್ಲಿ ಶಾಸಕದ್ವಯರ ಅಸಮಧಾನ

ಹೊಸನಗರ: ಮಲೆನಾಡು ಭಾಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಃ ಕಾರಣ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವಲಯ ಅರಣ್ಯಾಧಿಕಾರಿಗಳನ್ನು ಶಾಸಕದ್ವಯರಾದ ಆರಗ ಜ್ಞಾನೇಂದ್ರ ಹಾಗೂ ಬೇಳೂರು ಗೋಪಾಲಕೃಷ್ಣ ತರಾಟೆಗೆ ತೆಗೆದುಕೊಂಡರು.


ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ, ಖಾಸಗಿ ಒತ್ತುವರಿಯಷ್ಟೇ ಅಲ್ಲದೇ ಇತ್ತೀಚೆಗೆ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳ ಕಾಮಗಾರಿ ನಡೆಸಲೂ ಅಡ್ಡಿ ಪಡಿಸಲಾಗುತ್ತಿದೆ. ರಸ್ತೆ, ಸೇತುವೆ, ಟ್ಯಾಂಕ್, ಮೊಬೈಲ್ ಟವರ್‌ ಕಟ್ಟಲೂ ಬಿಡುತ್ತಿಲ್ಲ. ಕಾಡಿನಲ್ಲಿ ಹಳ್ಳಿ ಜನ ಹೆಣ ಸುಡಲೂ ಬಿಡದಂತೆ ಕಾಡುತ್ತಿದ್ದೀರಿ. ಇಂತಹ ಪರಿಸ್ಥಿತಿ ಆದಲ್ಲಿ ಮಲೆನಾಡಿನ ಜನರು ಬದುಕುವುದು ಹೇಗೆ ಎಂದು ಶಾಸಕರಿಬ್ಬರೂ ಅರಣ್ಯಾಧಿಕಾರಿಗಳ ಕಾರ್ಯವೈಖರಿ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಆಗಾಗ್ಗೆ ಮಳೆಯಾಗುತ್ತಿರುವ ಕಾರಣಕ್ಕೆ ತಾಲೂಕಿನಲ್ಲಿ ಹೆಚ್ಚಿನ ಭತ್ತದ ಬೆಳೆ ಹಾಳಾಗಿಲ್ಲ ಎಂದು ಕೃಷಿ ಅಧಿಕಾರಿ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಭತ್ತದ ಫಸಲು ರೈತರ ಕೈ ಸೇರುವವರೆಗೆ ಕೃಷಿ ಪಂಪ್‌ಗಳಿಗೆ ದಿನಕ್ಕೆ ಕನಿಷ್ಠ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡುವಂತೆ ಶಾಸಕರು ಮೆಸ್ಕಾಂ ಅಧಿಕಾರಿಯನ್ನು ಸೂಚಿಸಿದರು. ಅಲ್ಲದೇ ಪರಿವರ್ತಕಗಳು ಹಾಳಾದಲ್ಲಿ 24 ಗಂಟೆಯ ಒಳಗಾಗಿ ಬದಲಾವಣೆ ಮಾಡಬೇಕು ಎಂದು ಅವರು ಸೂಚಿಸಿದರು.

ಶಿಥಿಲಗೊಂಡ ಶಾಲಾ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸಬೇಡಿ. ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಎಂದು ಬಿಇಓ ಕೃಷ್ಣಮೂರ್ತಿಅವರಿಗೆ ತಿಳಿಸಿದರು. ಕೆಲ ಶಾಲೆಗಳಲ್ಲಿ ಮಕ್ಕಳು ಕೊಠಡಿ ಕೊರತೆಯಿಂದ ರಂಗಮಂದಿರದಲ್ಲಿ ಕುಳಿತು ಪಾಠ ಕೇಳುವಂತಾಗಿದೆ. ಈಗಾಗಲೇ ಕೈಗೆತ್ತಿಕೊಂಡಿರುವ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಲು ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಅಕ್ರಮ ಮದ್ಯ ಮಾರಾಟದಿಂದ ಯುವ ಜನತೆ ಆರೋಗ್ಯ ಕಳೆದುಕೊಳ್ಳುತ್ತಿದ್ದಾರೆ. ಎಲ್ಲೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವಲ್ಲಿ ಅಬಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಶಾಸಕದ್ವಯರು ಅಬಕಾರಿ ಅಧಿಕಾರಿಗಳ ವಿರುದ್ಧ ಆರೋಪಿಸಿದರು.

ಅಕ್ರಮ ಗೋ ಸಾಗಾಣಿಕೆ, ಗಾಂಜಾ ಪ್ರಕರಣ, ಜೂಜು ಮೊದಲಾದ ಕಾನೂನು ಬಾಹಿರ ಕೃತ್ಯಗಳು ತಾಲೂಕಿನಲ್ಲಿ ಎಲ್ಲೇ ನಡೆಯುತ್ತಿದ್ದರೂ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ನೈತಿಕ ಪೊಲೀಸ್ ಗಿರಿ ನಡೆಸಲು ಅವಕಾಶ ನೀಡಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸಿಪಿಐ ಗುರಣ್ಣ ಹೆಬ್ಬಾಳ್ ಅವರಿಗೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಇನ್ನೂ ಸಾವಿರಾರು ಮಹಿಳೆಯರಿಗೆ ಹಣ ಜಮಾ ಆಗದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಬಿಟ್ಟು ಹೋಗಿರುವ ಇಂತಹ ಫಲಾನುಭವಿಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಬಗೆಹರಿಸಿ, ಅವರಿಗೂ ಹಣ ಜಮಾ ಆಗುವಂತೆ ನೋಡಿಕೊಳ್ಳಲು ಸಿಡಿಪಿಓ ಅವರಿಗೆ ಸೂಚಿಸಿದರು.

ಸುಮಾರು 20 ಇಲಾಖೆಗಳ ಅಧಿಕಾರಿಗಳು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯ ಪಿಡಿಓಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಕೆಲವು ಅಧಿಕಾರಿಗಳು ಸಭೆಗೆ ಸೂಕ್ತವಾದ ಮಾಹಿತಿ ನೀಡದೇ ಇದ್ದದ್ದೂ ವಿಪರ್ಯಸವಾಗಿತ್ತು.


ಗ್ರಾಮಗಳಲ್ಲಿ ಆಗುವ ತೊಂದರೆಗಳಿಗೆ ಪಿಡಿಓಗಳೇ ಹೊಣೆ:
ಆಯಾಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ರಸ್ತೆಗಳ ಅಭಿವೃದ್ಧಿ ಇತ್ಯಾದಿಗಳ ತೊಂದರೆಯಾದರೇ ಅದಕ್ಕೆ ಆ ಗ್ರಾಮ ಪಂಚಾಯತಿಯ ಪಿಡಿಓಗಳೇ ನೇರ ಹೊಣೆಗಾರರಾಗಿದ್ದು ಪಿಡಿಓಗಳು ಜನರಿಗೆ ತೊಂದರೆಯಾಗದಂತೆ ಕೆಲಸ ಮಾಡಿ ಇಲ್ಲವಾದರೇ ಪಿಡಿಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ, ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಜಯಲಕ್ಷ್ಮಿ, ಇಓ ನರೇಂದ್ರಕುಮಾರ್, ನಾಮನಿರ್ದೇಶಿತ ಸದಸ್ಯ ವಾಟಗೋಡು ಸುರೇಶ್ ಮತ್ತಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago