Hosanagara | ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ, ಆರೋಪಿಗಳು ಸಹಿತ ₹ 26 ಸಾವಿರ ನಗದು ವಶಕ್ಕೆ
ಹೊಸನಗರ : ಇಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ ಜೂಜಿಗೆ ಬಳಸಿದ್ದ 26,660 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಈ ದಾಳಿಯಲ್ಲಿ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಗಂಗಪ್ಪ, ಸುನೀಲ್, ರಂಜೀತ್ಕುಮಾರ್, ಮಾಯಪ್ಪ, ಸಂದೀಪ, ವಾಹನ ಚಾಲಕರಾದ ಅವಿನಾಶ್ ಇನ್ನೂ ಮುಂತಾದವರು ಭಾಗವಹಿಸಿದ್ದರು.