Hosanagara | ಕಾಡುಕೋಣವನ್ನು ಬೇಟೆಯಾಡಿ ಮಾಂಸ ಒಯ್ದ ಖದೀಮರು !

0 1,183

ಹೊಸನಗರ : ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ.

ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 

ಇನ್ನೂ ಸ್ಥಳೀಯರ ಪ್ರಕಾರ, ಇದು ಯಾರೋ ಹೊರಗಡೆಯವರು ನಡೆಸಿರುವ ಕೃತ್ಯವಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ವೈಲ್ಡ್ ಲೈಫ್  ವೈದ್ಯರು ಆಗಮಿಸಿ ಪರಿಶೀಲಿಸಿದ್ದಾರೆ.

ಘಟನೆ ಸಂಬಂಧ  ನಗರ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 9ರ ಅಡಿ ಪ್ರಕರಣ ದಾಖಲಿಸಲಾಗಿದೆ.  

Leave A Reply

Your email address will not be published.

error: Content is protected !!