Categories: Shivamogga

Hosanagara | ಜೆಜೆಎಂ ಕಾಮಗಾರಿಗೆ ಅರಣ್ಯ ಇಲಾಖೆ ತಡೆ, ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ನೀರಿಗೆ ಬರ ಗ್ಯಾರಂಟಿ !

ಹೊಸನಗರ: ದೇಶದ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಯೋಜನೆಯಾಗಿರುವ ಜಲಜೀವನ್ ಮಿಷನ್‌ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ. ಇಲಾಖೆಗಳ ನಡುವಿನ ಹೊಂದಾಣಿಕೆ, ಅರಣ್ಯ ಇಲಾಖೆಯ ಬಿಗಿ ಕಾನೂನು ಮಹತ್ವಾಕಾಂಕ್ಷಿ ಯೋಜನೆಯ ಜಾರಿಗೆ ಅಡ್ಡಿಯಾಗಿ ಪರಿಣಮಿಸಿದೆ.

ಹೊಸನಗರ ತಾಲೂಕಿನ ಸುಮಾರು 65ಕ್ಕೂ ಹೆಚ್ಚು ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ. ವಿಚಿತ್ರವೆಂದರೆ ಲಕ್ಷಾಂತರ ರೂ. ವೆಚ್ಚದ ಓಎಚ್‌ಟಿ (ನೀರಿನ ಟ್ಯಾಂಕ್) ನಿರ್ಮಾಣ ಕಾರ್ಯ ಆರಂಭಗೊಂಡ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಕಾಮಗಾರಿಯನ್ನು ತಡೆ ಹಿಡಿದಿದ್ದಾರೆ. ಅರಣ್ಯ ಪ್ರದೇಶದಲ್ಲಿ ಕೊಳವೆಬಾವಿ, ಪೈಪ್‌ಲೈನ್ ನಿರ್ಮಾಣ ಕಾರ್ಯಕ್ಕೂ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ತೊಡಕುಂಟಾಗಿದೆ.

ಮಾರುತಿಪುರದಲ್ಲಿ 5, ಹರಿದ್ರಾವತಿಯಲ್ಲಿ 1, ಮುಂಬಾರಿನಲ್ಲಿ 2, ಅಮೃತದಲ್ಲಿ 2, ಕೋಡೂರಿನಲ್ಲಿ 2, ಬೆಳ್ಳೂರಿನಲ್ಲಿ 16, ಅರಮನೆಕೊಪ್ಪದಲ್ಲಿ 7, ಅರಸಾಳು 10, ಹೆದ್ದಾರಿಪುರದಲ್ಲಿ 8 ಹಾಗೂ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 7 ಕಾಮಗಾರಿಗಳು ಅರಣ್ಯ ಇಲಾಖೆಯ ಆಕ್ಷೇಪಣೆಯಿಂದಾಗಿ ಸ್ಥಗಿತಗೊಂಡಿವೆ.

ನೀರಿನ ಹರಿವು ಸರಾಗವಾಗಿ ಆಗುವಂತಹ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಟ್ಯಾಂಕ್, ಕೊಳವೆಬಾವಿ ಹಾಗೂ ಪೈಪ್‌ಲೈನ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಫಾರೆಸ್ಟ್ ಕ್ಲಿಯರೆನ್ಸ್ ಪಡೆಯದ ಕಾಮಗಾರಿ ಕೈಗೊಳ್ಳಲು ಈಗ ಅನುಮತಿ ನಿರಾಕರಿಸಲಾಗಿದೆ.

ಗರ್ತಿಕೆರೆ ಸಮೀಪದ ಶಿವಪುರದಲ್ಲಿ ಟ್ಯಾಂಕ್ ನಿರ್ಮಾಣದ ತಳಪಾಯದ ಗುಂಡಿಯನ್ನೇ ಮುಚ್ಚಲಾಗಿದೆ. ಗುಳ್ಳೆಕೊಪ್ಪ, ಅಡ್ಡಾಳಕೊಪ್ಪ, ಕಂಕನಬೈಲು ಹಳ್ಳಿಗಳಲ್ಲಿ ಕಾಮಗಾರಿಯ ಪ್ರಗತಿ ಹಂತದಲ್ಲಿರುವಾಗ ನಿಲ್ಲಿಸಲಾಗಿದೆ.
ಜೆಜೆಎಂ ಅಡಿಯಲ್ಲಿ ತಾಲೂಕಿನಲ್ಲಿ 140 ಕೋಟಿ ರೂ. ಅಂದಾಜು ಮೊತ್ತದ ಒಟ್ಟು 320 ಕಾಮಗಾರಿಗಳು ಚಾಲನೆಯಲ್ಲಿವೆ. ಹಲವು ಕಡೆಗಳಲ್ಲಿ ಇಷ್ಟರಲ್ಲಿಯೇ ಕಾಮಗಾರಿಗೆ ಚಾಲನೆ ದೊರೆಯಲಿದೆ.‌ ಇಲ್ಲಿಯೂ ಅರಣ್ಯ ಪ್ರದೇಶದಲ್ಲಿಪೈಪ್‌ಲೈನ್ ಹಾಗೂ ಟ್ಯಾಂಕ್ ನಿರ್ಮಾಣ ಕಾರ್ಯ ನಡೆಯುವಲ್ಲಿ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಲಿದೆ.

ಫಾರೆಸ್ಟ್ ಕ್ಲಿಯರೆನ್ಸ್ ಪಡೆದಿಲ್ಲ:
ಅರಣ್ಯ ಸಂರಕ್ಷಣಾ ಕಾಯಿದೆಯಡಿ ಅರಣ್ಯ ಭೂಮಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸುವ ಮುನ್ನ ಫಾರೆಸ್ಟ್ ಕ್ಲಿಯರೆನ್ಸ್ ಪಡೆಯುವುದು ಅನಿವಾರ್ಯವಾಗಿದೆ. ಆದರೆ ಕಾಮಗಾರಿ ಕೈಗೊಳ್ಳುವ ಮುನ್ನ ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆಯಲು ಮುಂದಾಗದಿರುವುದು ಈಗ ಸಮಸ್ಯೆಯಾಗಿದೆ. ಕಾಮಗಾರಿ ಅನುಷ್ಠಾನಕ್ಕೆ ಪೂರ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆದ ವಿವಿಧ ಇಲಾಖೆಗಳ ಸಭೆಯಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಹಾ ಭಾಗಿಯಾಗಿದ್ದರು. ಒಂದು ಹಂತದಲ್ಲಿ ಅರಣ್ಯ ಇಲಾಖೆ ಸಹಾ ಕುಡಿವ ನೀರಿನ ಕಾಮಗಾರಿ ಎನ್ನುವ ಕಾರಣಕ್ಕೆ ಆಕ್ಷೇಪಿಸದೇ ಮೃದು ಧೋರಣೆ ಅನುಸರಿಸಿತ್ತು. ಆದರೆ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಿರ್ವಹಿಸುವುದಕ್ಕೆ ಆಕ್ಷೇಪಿಸಿ ಸಾರ್ವಜನಿಕರಿಂದ ಒಂದೆರಡು ದೂರು ಬಂದ ಬಳಿಕ ಅರಣ್ಯಾಧಿಕಾರಿಗಳು ಬಿಗಿ ನಿಲುವು ತಳೆದಿದ್ದಾರೆ.

ನೀರಿಗೆ ತತ್ವಾರ:
ಒಂದೆಡೆ ಮುಂಗಾರು ವೈಫಲ್ಯದಿಂದ ಅಂತರ್ಜಲ ಕುಸಿತವಾಗಿದ್ದು, ಕುಡಿವ ನೀರಿನ ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿದೆ. ಈಗಾಗಲೇ ಹಲವು ಕಡೆಗಳಲ್ಲಿ ನೀರಿನ ತೀವ್ರ ಕೊರತೆ ಕಂಡುಬಂದಿದೆ. ಜಲಜೀವನ್ ಮಿಷನ್‌ ಯೋಜನೆಯಡಿಯಲ್ಲಿ ನೂತನ ಕೊಳವೆಬಾವಿ, ಟ್ಯಾಂಕ್, ಪೈಪ್‌ಲೈನ್‌ ಆದಲ್ಲಿ ನೀರಿನ ಸಮಸ್ಯೆ ಬಗೆ ಹರಿಯಬಹುದೆನ್ನುವ ನಿರೀಕ್ಷೆ ಕಾಮಗಾರಿ ವಿಳಂಬದಿಂದಾಗಿ ಹುಸಿಯಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

23 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago