ಹೊಸನಗರ: ಸುಮಾರು 4 ತಿಂಗಳಿಂದ ಹೊಸನಗರ ತಹಶೀಲ್ದಾರ್ ಹುದ್ದೆ ಖಾಲಿ ಇದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್ರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಯಾವುದೇ ಸಮಸ್ಯೆಯಿದ್ದರೂ ಭೇಟಿ ಮಾಡಿ:
ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ ಸಮಸ್ಯೆಗಳಿದ್ದರೂ ಖುದ್ದು ಭೇಟಿ ಮಾಡಲು ಅವಕಾಶವಿದೆ. ನಿಮಗೆ ತಾಲ್ಲೂಕು ಕಛೇರಿಯಿಂದ ಆಗುತ್ತಿರುವ ಯಾವುದಾದರೂ ಸಮಸ್ಯೆಗಳಿದ್ದರೆ ಅಥವಾ ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದರೆ ನಮ್ಮನ್ನೂ ಭೇಟಿ ಮಾಡಿ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಪಡೆಯಬಹುದೆಂದು ತಾಲೂಕಿನ ಜನತೆಗೆ ತಿಳಿಸಿದರು.
ಅಭಿನಂದನೆ:
ನೂತನವಾಗಿ ಅಧಿಕಾರ ಸ್ವೀಕರಿಸಿದ ರಶ್ಮಿಯವರನ್ನು ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಗ್ರೇಡ್ 2ತಹಶೀಲ್ದಾರ್ ರಾಕೇಶ್, ಶಿರಾಸ್ಥೆದಾರ್ ಮಂಜುನಾಥ ಕಟ್ಟೆ, ಚುನಾವಣೆ ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರಾಘವೇಂದ್ರ, ಗಣೇಶ್, ಶಿವಪ್ಪ ಇನ್ನೂ ಮುಂತಾದ ನೌಕರ ವರ್ಗದವರು ಪುಸ್ತಕ ನೀಡುವುದರ ಮೂಲಕ ಬರಮಾಡಿಕೊಂಡರು.
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…