Hosanagara | ಮದುವೆ ನಿಶ್ಚಿತಾರ್ಥದ ಮುಂಚೆ ರಕ್ತದಾನಕ್ಕೆ ಮುಂದಾಗಿ ಧನ್ಯತೆ ಮೆರೆದ ಯುವಕ

ಹೊಸನಗರ : ತನ್ನ ಮದುವೆ ನಿಶ್ಚಿತಾರ್ಥಕ್ಕೆ ಕೆಲವೇ ಗಂಟೆಗಳ ಮುಂಚೆ ಸ್ವಯಂ ಪ್ರೇರಿತನಾಗಿ ರಕ್ತದಾನ ಮಾಡುವ ಮೂಲಕ ಯುವಕ ವಿಶ್ವನಾಥ ಇತರರಿಗೆ ಮಾದರಿ ಆಗಿದ್ದಾರೆ.

ತಾಲೂಕಿನ ರಾಮಚಂದ್ರಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂಭತ್ತಿ ಗ್ರಾಮದ ವಾಸಿ ವಿಶ್ವನಾಥ, ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದು ಪೊಲೀಸ್ ಇಲಾಖೆ ಸಿಬ್ಬಂದಿಗಳ ಕರೆಗೆ ಓಗೊಟ್ಟು ಭಾನುವಾರ ಶಿವಮೊಗ್ಗದ ಆಶಾಜ್ಯೋತಿ ಸ್ವಯಂ ಪ್ರೇರಿತರಕ್ತದಾನ ಸಂಸ್ಥೆ ಹಾಗೂ ತೀರ್ಥಹಳ್ಳಿ ಹೆಚ್‌ಡಿಎಫ್‌ಸಿ ಬ್ಯಾಂಕ್‌ಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದ್ದು ವಿಶೇಷವಾಗಿತ್ತು.

ರಕ್ತದಾನಿ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಮಾತನಾಡಿ, ಅಗತ್ಯ ಹಾಗೂ ಅನಿವಾರ್ಯ ಸಂದರ್ಭಗಳಲ್ಲಿ ರಕ್ತದಾನವು ಅವಘಡಕ್ಕೀಡದವರ ಜೀವ ಕಾಪಾಡುತ್ತದೆ. ಯುವ ಜನತೆ ರಕ್ತದಾನದಂತ ಮಹತ್ಕಾರ್ಯಕ್ಕೆ ಮುಂದಾಗಬೇಕೆಂದು ಕಿವಿಮಾತು ಹೇಳಿದರು.

ತೀರ್ಥಹಳ್ಳಿ ಹೆಚ್‌ಡಿಎಫ್‌ಸಿ ಬ್ಯಾಂದಕ್ನ ವ್ಯವಸ್ಥಾಪಕಿ ರಶ್ಮಿ ಶೆಟ್ಟಿ ಮಾತನಾಡಿ, ರಕ್ತದಾನದಂತ ಸಿಎಸ್‌ಆರ್ ಕಾರ್ಯಕ್ರಮಗಳಿಗೆ ಬ್ಯಾಂಕ್ ಉತ್ತೇಜನ ನೀಡುತ್ತಿದ್ದು, ಬ್ಯಾಂಕ್ ಆರಂಭಗೊಂಡು ಹದಿನೈದು ವರ್ಷಗಳು ಸಂದಿರುವ ಹಿನ್ನಲೆಯಲ್ಲಿ ಬ್ಯಾಂಕಿನ ಸಹಯೋಗದಲ್ಲಿ ರಾಜ್ಯದ ವಿವಿಧೆಡೆ ನಡೆದ ಶಿಬಿರಗಳಲ್ಲಿ ಸುಮಾರು ಐವತ್ತು ಸಾವಿರ ಯೂನಿಟ್ ರಕ್ತ ಸಂಗ್ರಹ ಆಗಿದ್ದು, ಬ್ಯಾಂಕ್ ಸಮಾಜಮುಖಿ ಕಾರ್ಯಕ್ರಮಗಳ ಪರ ದಾಪುಗಾಲು ಹಾಕುತ್ತಿದೆ ಎಂಬುದನ್ನು ಇದು ಸಾಕ್ಷೀಕರಿಸಿದೆ ಎಂದರು.

ಹಲವಾರು ಆರೋಗ್ಯವಂತ ಯುವಕರು ಈ ರಕ್ತದಾನ ಶಿಬಿರದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನಿರ್ದೇಶನದಂತೆ, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ಸತಾರ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಕೆ.ವೈ.ಶಿವಾನಂದ ಸೂಚನೆ ಮೇರೆಗೆ, ಪರಿಸರಾಸಕ್ತ, ರಕ್ತದಾನ ಶಿಬಿರದ ಪ್ರೇರಕಶಕ್ತಿ, ಭದ್ರಾವತಿ ಸಂಚಾರಿ ವಿಭಾಗದ ಹೆಡ್ ಕಾನ್ಸ್‌ಟೇಬಲ್ ಹಾಲೇಶಪ್ಪ ಸಲಹೆಯಂತೆ ಶಿಬಿರ ನಡೆಯಿತು.

ಶಿಬಿರದಲ್ಲಿ ಆಶಾ ಜ್ಯೋತಿ ಸಂಸ್ಥೆಯ ಡಾ. ಹುಲುಮನಿ, ಸ್ವಾಮಿ, ಪಿಆರ್‌ಓ ರವಿಕುಮಾರ್, ಉಲ್ಲಾಸ್, ಅಜ್ಮತ್, ಶಶಾಂಕ್, ರೂಹಿನಾ, ಬ್ಯಾಂಕಿನ ಸಿಬ್ಬಂದಿ ವಿಮಲ, ಪೊಲೀಸ್ ಸಿಬ್ಬಂದಿಗಳಾದ ವೀರೇಶ್, ತೀರ್ಥೇಶ್, ಗಂಗಣ್ಣ, ರಾಘವೇಂದ್ರ, ಎಎಸ್‌ಐ ಶಿವಪುತ್ರ ಸೇರಿದಂತೆ ಹಲವರು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago