ಹೊಸನಗರ ; ಅಕ್ರಮಗಳು ಕಂಡುಬಂದಲ್ಲಿ, ಸರ್ಕಾರಿ ನೌಕರರು ಸಾರ್ವಜನಿಕ ಸೇವೆ ನೀಡಲು ಸತಾಯಿಸಿದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬಹುದು. ಈ ಬಗ್ಗೆ ಯಾವುದೇ ಅಂಜಿಕೆ ಬೇಡ ಎಂದು ಲೋಕಾಯುಕ್ತ ಡಿವೈಎಸ್ಪಿ ಉಮೇಶ ಈಶ್ವರ ನಾಯ್ಕ್ ಹೇಳಿದರು.
ತಾಲೂಕು ಕಛೇರಿಯಲ್ಲಿ ಸಾರ್ವಜನಿಕರಿಂದ ಕುಂದು-ಕೊರತೆ ಅರ್ಜಿ ಸ್ವೀಕರಿಸಿದ ಬಳಿಕ ಮಾತನಾಡಿ,
ಹಲವು ಕಡೆ ಲೋಕಾಯುಕ್ತ ಸಂಸ್ಥೆಯ ಹೆಸರು ದುರ್ಬಳಕೆ ಆಗುತ್ತಿದೆ. ಇದು ಸರಿಯಲ್ಲ. ಸರಕಾರಿ ಕೆಲಸಗಳನ್ನು ಮಾಡಿಕೊಡಲು ಹಣಕ್ಕೆ ಆಮಿಷ ಒಡ್ಡಿರುವುದು, ಕರ್ತವ್ಯ ಲೋಪ ಕುರಿತು ದೂರುಗಳ ಬಂದಲ್ಲಿ ಲೋಕಾಯುಕ್ತ ಸಂಸ್ಥೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತದೆ. ದೂರು ನೀಡಲು ಹಿಂಜರಿಕೆ ಬೇಡ ಎಂದರು.
ಸರಕಾರಿ ನೌಕರರು ತಮ್ಮ ಕರ್ತವ್ಯವನ್ನು ನಿಯತ್ತಿನಿಂದ ನಿರ್ವಹಿಸಬೇಕು. ತಾವು ಪಡೆಯುವ ಸಂಬಳ ಸಾರ್ವಜನಿಕರ ಹಣ ಎನ್ನುವುದನ್ನು ಮರೆಯಬಾರದು ಎಂದ ಅವರು, ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಕಾನೂನುಗಳು ರಚನೆ ಆಗಿರುವುದೇ ಜನರ ಅನುಕೂಲಕ್ಕಾಗಿ. ಯಾವುದೇ ಒತ್ತಡ, ಆಮಿಷಗಳಿಗೆ ಬಲಿಯಾಗಬಾರದು ಎಂದರು.
ಅಕ್ರಮ ಮರಳು ಗಣಿಗಾರಿಕೆ, ಕಂದಾಯ, ಆರೋಗ್ಯ, ಅರಣ್ಯ ಇಲಾಖೆಗೆ ಸಂಬಂಧಿಸಿದ ದೂರುಗಳು ಸಲ್ಲಿಕೆಯಾದವು.
ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್, ಇಓ ನರೇಂದ್ರಕುಮಾರ್, ಲೋಕಾಯುಕ್ತ ಹಾಗೂ ವಿವಿಧ ಇಲಾಖೆಯ ಅಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…