Hosanagara | ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿ ಹಾವು ಪತ್ತೆ

ಹೊಸನಗರ : ಇಲ್ಲಿನ ಹೋಲಿ ರೆಡೀಮ‌ರ್ ಪ್ರೌಢಶಾಲೆಗೆ ಮುಂಬಾರು ಗ್ರಾಪಂ ವ್ಯಾಪ್ತಿಯ ಸಾವಂತೂರು ಗ್ರಾಮದಿಂದ ಬರುವ ಭಾವನಾ ಎಂಬ ವಿದ್ಯಾರ್ಥಿನಿಯ ಶಾಲಾ ಬ್ಯಾಗ್‌ನ ಒಳಗೆ ಕಾಡು ಜಾತಿಯ ಹಾವೊಂದು ಗುರುವಾರ ಪತ್ತೆಯಾಗಿದೆ.

ಬೆಳಗ್ಗೆ 10 ಗಂಟೆಗೆ ಶಾಲೆ ಆರಂಭವಾದರೂ ಮಧ್ಯಾಹ್ನ 1 ಗಂಟೆವರೆಗೂ ಬ್ಯಾಗ್‌ನಲ್ಲಿ ಹಾವು ಇರುವುದು ವಿದ್ಯಾರ್ಥಿನಿಯ ಗಮನಕ್ಕೆ ಬಂದಿರಲಿಲ್ಲ. ಹಲವು ಬಾರಿ ಬ್ಯಾಗ್‌ನ ಒಳಗೆ ಕೈ ಹಾಕಿ ಪುಸ್ತಕ, ಪೆನ್ನುಗಳನ್ನು ತೆಗೆದುಕೊಂಡಿದ್ದಾಳೆ. ಮಧ್ಯಾಹ್ನದ ವೇಳೆ ಒಳಗಿರುವ ಹಾವನ್ನು ನೋಡಿ, ಭಯಗೊಂಡು ತಕ್ಷಣ ತನ್ನ ಸ್ನೇಹಿತೆ ಪಕ್ಕದ ವಿದ್ಯಾರ್ಥಿನಿಗೆ ತಿಳಿಸಿದ್ದಾಳೆ. ಆ ವಿದ್ಯಾರ್ಥಿನಿ ಹಾವು ಇದೆ ಎಂದು ಸುಮ್ಮನೆ ತಮಾಷೆ ಮಾಡುತ್ತೀಯಾ? ಎಂದು ಬ್ಯಾಗ್‌ನೊಳಗೆ ಕೈ ಹಾಕಿ ಪುಸ್ತಕ ತೆಗೆಯಲು ಪ್ರಯತ್ನಿಸಿದ್ದಾಳೆ. ಈ ಸಂದರ್ಭದಲ್ಲಿ ಕೈ ಹಾವಿನ ಬಾಲ ಸ್ಪರ್ಶಿಸಿದೆ.

ಇಬ್ಬರು ವಿದ್ಯಾರ್ಥಿನಿಯರಿಗೂ ಹಾವು ಯಾವುದೇ ತೊಂದರೆ ಮಾಡಿಲ್ಲ. ತತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಗಮನಕ್ಕೆ ತಂದಾಗ, ಅವರು ಶಾಲೆಗೆ ಆಗಮಿಸಿ ಇಬ್ಬರು ವಿದ್ಯಾರ್ಥಿನಿಯರನ್ನು ಮುಂಜಾಗ್ರತಾ ಕ್ರಮವಾಗಿ ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಮನೆಯಿಂದ ಶಾಲೆಗೆ ಬರುವ ಮುನ್ನ ಮಕ್ಕಳು ಬ್ಯಾಗ್ ಮತ್ತು ಶೂ ಧರಿಸುವ ಮುನ್ನ ಪರಿಶೀಲಿಸಿಕೊಂಡು ಶಾಲೆಗೆ ಬರುವುದು ಒಳಿತು. ಮಲೆನಾಡ ಪರಿಸರವಾಗಿರುವುದರಿಂದ ಹಲವು ಬಗೆಯ ಹಾವುಗಳು ಮನೆ ಸುತ್ತಮುತ್ತ ವಾಸಿಸುತ್ತವೆ. ಈ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು.
– ಹೆಚ್.ಆರ್. ಕೃಷ್ಣಮೂರ್ತಿ, ಹೊಸನಗರ ಬಿಇಓ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago