Hosanagara | ಸಿಪಿಐ ನೇತೃತ್ವದ ತಂಡ ಪಟಾಕಿ ಅಂಗಡಿ ಮೇಲೆ ದಿಢೀರ್ ದಾಳಿ, ಪರಿಶೀಲನೆ


ಹೊಸನಗರ: ಸರ್ಕಾರದ ಆದೇಶದ ಮೇರೆಗೆ ಹೊಸನಗರದ ಪಟ್ಟಣದಲ್ಲಿ ಮಾರಾಟದ ಲೈಸನ್ಸ್ ಪಡೆದಿರುವ ಕೆಲವು ಪಟಾಕಿ ಅಂಗಡಿಗಳ ಮೇಲೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದರು.


ನಂತರ ಮಾತನಾಡಿದ ಗುರಣ್ಣ ಎಸ್ ಹೆಬ್ಬಾಳ್‌ರವರು, ಯಾವುದೇ ಸಾಮಾನ್ಯ ಅಂಗಡಿಗಳಲ್ಲಿ ಪಟಾಕಿ ಮಾರಾಟ ಮಾಡುವುದನ್ನು ಸರ್ಕಾರ ನಿಷೇಧಿಸಿದೆ. ಅದರಲ್ಲಿಯೂ ಲೈಸನ್ಸ್ ಪಡೆಯದೇ ಕೆಲವು ಅಂಗಡಿಗಳಲ್ಲಿ ಪಟಾಕಿ ಮಾರಾಟ ಮಾಡುತ್ತಿರುವ ದೂರುಗಳು ಬರುತ್ತಿದೆ ಇಂಥಹ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅಧಿಕೃತ ಲೈಸನ್ಸ್ ಹೊಂದಿರುವವರು ಕೇವಲ ಗ್ರೀನ್ ಪಟಾಕಿಗಳನ್ನು ಮಾತ್ರ ಅನುಮತಿ ಪಡೆದು ಮಾರಾಟ ಮಾಡಲು ಅವಕಾಶವಿರುತ್ತದೆ. ಉಳಿದಂತೆ ಯಾರೇ ಆಗಲಿ ಪಟಾಕಿಗಳನ್ನು ಮಾರುವುದು, ಶೇಖರಿಸುವುದು, ಸಾಗಿಸುವುದು ಮಾಡಿದಲ್ಲಿ ಕಠಿಣ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ.

ಬೇರೆ ಪಟಾಕಿಗಳನ್ನು ಮಾರಾಟ ಮಾಡುವುದು ಮತ್ತು ಶೇಖರಿಸುವುದು ಕಂಡು ಬರುವುದರ ಜೊತೆಗೆ ಯಾವುದೇ ಅನಾಹುತವಾದರೂ ಅಂಗಡಿಯ ಮಾಲೀಕರು ಹಾಗೂ ಅಂಗಡಿಗೆ ಬಾಡಿಗೆ ನೀಡಿರುವವರು ಪೂರ್ಣ ಜವಾಬ್ದಾರರಾಗಿದ್ದು ಹೊಸನಗರ ತಾಲ್ಲೂಕಿನಲ್ಲಿ ಅನಾಹುತದಂತಹ ಘಟನೆ ನಡೆಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

3 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

13 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

19 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago