ಹೊಸನಗರ: ಪಟ್ಟಣದ ಹೋಲಿ ರೆಡಿಮರ್ ಖಾಸಗಿ ಶಾಲೆಯ ಸಮನ್ವಿ ತಟ್ಟೆ ಎಸೆತದಲ್ಲಿ, ನಿಧಿತ್ ಕೆ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನದೊಂದಿಗೆ ಜಿಲ್ಲಾ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನೆ:
ಹೋಲಿ ರೆಡಿಮರ್ ಶಾಲೆಯ ವಿದ್ಯಾರ್ಥಿ ನಿಧಿತ್ ಕೆ.ಯವರು ದೈಹಿಕ ಶಿಕ್ಷಕ ಕಮಲಾಕರ್ರವರ ಪುತ್ರನಾಗಿದ್ದು ಸಮನ್ವಿಯವರು ರೇಖಾ ಹರೀಶ್ರವರ ಪುತ್ರಿಯಾಗಿದ್ದಾರೆ. ಇವರಿಗೆ ಹೋಲಿ ಶಾಲೆಯ ಪ್ರಾಂಶುಪಾಲರಾದ ಐರಿನ್ ಡಿಸಿಲ್ವಾ, ಸಂಚಾಲಕಿ ರುಫೀನ ಡಿಸೋಜ ಹಾಗೂ ಶಾಲೆಯ ಎಲ್ಲ ಶಿಕ್ಷಕ ಶಿಕ್ಷಕಿಯರು ಅಭಿನಂದಿಸಿ ರಾಜ್ಯಮಟ್ಟದಲ್ಲಿಯು ಗೆದ್ದು ಬರಲಿ ಎಂದು ಶುಭ ಹಾರೈಸಿದ್ದಾರೆ.
ಮಲೆನಾಡು ಫ್ರೌಡ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ
ಇಂದು ನಡೆದ ಶಿವಮೊಗ್ಗ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪಟ್ಟಣದ ಮಲೆನಾಡು ಪ್ರೌಢ ಶಾಲೆ ಬಾಲಕಿಯರು ಭಾಗವಹಿಸಿ ಉತ್ತಮ ಪ್ರದರ್ಶನವನ್ನು ನೀಡಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿ, ಮೂವರು ವಿದ್ಯಾರ್ಥಿಗಳಾದ ಛಾಯಾ, ಶರಣ್ಯ, ವಿಶಾತ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇವರಿಗೆ ಇಲಾಖೆ, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ, ಪೋಷಕರು SDMC ಯವರು ಅಭಿನಂದಿಸಿದ್ದಾರೆ.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…